Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮರ್ಥ್ ಶಾಮನೂರ್​​​​​ಗೆ ಒಲಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್

---Advertisement---

 

ಸುದ್ದಿಒನ್, ದಾವಣಗೆರೆ, ಮಾರ್ಚ್. 21 : ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಹಾಗೂ ಕಾಂಗ್ರೆಸ್ ನಾಯಕರ ಪಾಲಿಗೆ ​​ದೊಡ್ಡ ತಲೆನೋವಾಗಿ ಪರಿಗಣಿಸಿದ್ದ ದಾವಣಗೆರೆ ದಕ್ಷಿಣ ಟಿಕೆಟ್​​ ಗೊಂದಲ ಕೊನೆಗೂ ಬಗೆಹರಿದಿದೆ.

ಕೊನೆಗೂ ಶಾಮನೂರ ಶಿವಶಂಕರಪ್ಪ ನವರ ಮೊಮ್ಮಗ ಸಮರ್ಥ್ ಶಾಮನೂರ್​​​​​ಗೆ ಕಾಂಗ್ರೆಸ್ ಹೈಕಮಾಂಡ್​​ ಟಿಕೆಟ್ ನೀಡುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. ಅಂತಿಮವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​ ಮತ್ತೆ ಶಾಮನೂರ ಕುಟುಂಬದ ಪಾಲಾಗಿದೆ.

 

ಶಾಮನೂರ ಶಿವಶಂಕರಪ್ಪ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರದ ಟಿಕೆಟ್ ಅಲ್ಪಸಂಖ್ಯಾತದವರಿಗೆ ನೀಡಬೇಕೆಂದು ಸಚಿವ ಜಮೀರ್ ಅಹಮದ್ ಪಟ್ಟು ಹಿಡಿದಿದ್ದರು. ಕಳೆದ ಕೆಲವು ದಿನಗಳಿಂದ ಈ ವಿಚಾರವಾಗಿ ಬಾರೀ ಕುತೂಹಲ ಮೂಡಿಸಿತ್ತು.  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಮತ್ತು ಸುರ್ಜೇವಾಲ ಸೇರಿದಂತೆ ನಾಯಕರು ಸುದೀರ್ಘ ಚರ್ಚೆ ನಡೆಸಿ ಸಂಧಾನ ಮಾಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now