Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಘ ಶತಾಬ್ದಿ | ಚಳ್ಳಕೆರೆಯಲ್ಲಿ ಗಮನಸೆಳೆದ ಆರ್‌ಎಸ್‌ಎಸ್‌ ಪಥಸಂಚಲನ…!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 18 : ಜಗತ್ತಿನ ಅತಿದೊಡ್ಡ ಸಂಘಟನೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್‌) ಶತಾಬ್ದಿ ನಿಮಿತ್ತ ನಗರದಲ್ಲಿ ಆಯೋಜಿಸಿದ್ದ “ಭವ್ಯ ಪಥಸಂಚಲನ” ಕಾರ್ಯಕ್ರಮದಲ್ಲಿ ಗಣವೇಷ ಸಹಿತ 250 ಕ್ಕೂ ಹೆಚ್ಚು ಆರ್‌ಎಸ್‌ಎಸ್‌ ನ ಸ್ವಯಂ ಸೇವಕರು ಭಾಗವಹಿಸಿದ್ದರು.

ನಗರದ ಗಾಂಧಿನಗರದ ಮುಖ್ಯ ರಸ್ತೆಯಿಂದ ಹೊರಟ ಆಕರ್ಷಕ ಪಥ ಸಂಚಲನ ಗಾಂಧಿನಗರ, ಬಸವೇಶ್ವರ ವೃತ್ತ, ನೆಹರು ವೃತ್ತ, ಅಂಬೇಡ್ಕರ್ ವೃತ್ತ ದಿಂದ ತ್ಯಾಗರಾಜನ ನಗರದ ಮುಖ್ಯ ರಸ್ತೆಯ ಮೂಲಕ ವಾಲ್ಮೀಕಿ ವೃತ್ತಕ್ಕೆ ತಲುಪಿ ನಂತರ ಬಿಎಂಜಿಎಚ್ ಪೌಢಶಾಲೆ ಆವರಣಕ್ಕೆ ಬಂದು ತಲುಪಿತು. ಪಥಸಂಚಲನ ವೇಳೆ ಸಾರ್ವಜನಿಕರು ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರಿಗೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಆರ್‌ಎಸ್‌ಎಸ್‌ ನ ಮುಖಂಡ ಪ್ರಕಾಶ ಮಾತನಾಡಿ, ರಾಷ್ಟೀಯ ಸ್ವಯಂ ಸೇವಕ ಸಂಘವು ಸಬಲ, ಸದೃಢ ಹಾಗೂ ಆರೋಗ್ಯಪೂರ್ಣ ಸಮಾಜ ನಿರ್ಮಾಣದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಹಿಂದೂ ಪರಂಪರೆ, ಸನಾತನ ಸಂಸ್ಕೃತಿ ರಕ್ಷಣೆಯ ಧ್ಯೇಯದೊಂದಿಗೆ ರಾಷ್ಟ್ರಪ್ರೇಮಿಗಳ ಶಕ್ತಿಶಾಲಿ ಸಂಘಟನೆಯಾಗಿದೆ ಎಂದರು.

ಈ ಪಂಥ ಸಂಕಲನದಲ್ಲಿ ಆರ್‌ಎಸ್‌ಎಸ್‌ ನ ಬಾಳೆಕಾಯಿ ರಾಮದಾಸ್, ಚಳ್ಳಕೆರೆ ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಬಿ.ಎಂ. ಸುರೇಶ, ಜಯಪಾಲಯ್ಯ, ಡಾ.ಮಂಜುನಾಥ, ಪ್ರಕಾಶ,(ಡಾಬಾ) ಎಬಿವಿಪಿ ಮಂಜುನಾಥ, ಶ್ರೀನಿವಾಸ್, ನವೀನ್, ದಯಾನಂದ ಪ್ರಹ್ಲಾದ್, ಮಾರುತಿ, ಕೃಷ್ಣಾ, ಯತೀಶ, ಮಿರಾಸಾಭಿಹಳ್ಳಿ ಸುರೇಶ, ಮಾತೃಶ್ರೀ ಮಂಜುನಾಥ, ಎಲೆ ವೀರಭದ್ರಪ್ಪ, ಚಿದಾನಂದ, ಸೇರಿದಂತೆ ಆರ್‌ಎಸ್‌ಎಸ್‌ ಮುಖಂಡರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now