ಸಂತೋಷ್ ನಮ್ಮ ಜಿಲ್ಲೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳಬೇಕಿತ್ತು : ಸೋಮಲಿಂಗ ಸ್ವಾಮೀಜಿ

ವಿಜಯಪುರ: ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ನಿನ್ನೆ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲೂ ಡೆತ್ ನೋಟ್ ನಲ್ಲಿ ಸಚಿವ ಈಶ್ವರಪ್ಪ ಅವರೇ ನೇರ ಕಾರಣ ಅಂತ ಕೂಡ ತಿಳಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನಾಯಕರು ಈಶ್ಚರಪ್ಪ ಬಂಧನಕ್ಕೆ ಒತ್ತಾಯಿಸಿದ್ದಾರೆ. ಈ ಮಧ್ಯೆ ಸೋಮಲಿಂಗ ಸ್ವಾಮೀಜಿ ಈಶ್ಚರಪ್ಪ ಪರ ಬ್ಯಾಟ್ ಬೀಸಿದ್ದಾರೆ.

ಇದು ಈಶ್ವರಪ್ಪ ವಿರುದ್ಧ ನಡೆದ ಷಡ್ಯಂತ್ರ. ಗುತ್ತಿಗೆದಾರ ಸಂತೋಷ್ ನಮ್ಮ ನೆರೆಯ ವ್ಯಕ್ತಿ ಆತ್ಮಹತ್ಯೆ. ಆತ್ಮಹತ್ಯೆ ಮಾಡಿಕೊಳ್ಳುವುದಿದ್ದರೆ ನಮ್ಮ ಜಿಲ್ಲೆಯಲ್ಲಿಯೇ ಮಾಡಿಕೊಳ್ಳಬೇಕಿತ್ತು. ಈಶ್ವರಪ್ಪ ಅವರು 49 ವರ್ಷದಿಂದ ರಾಜಕಾರಣದಲ್ಲಿ ಮಾಡುತ್ತಿದ್ದಾರೆ. ಈಶ್ವರಪ್ಪ ಸಾಹೇಬರು ಅಂಥವರಲ್ಲ ಎಂದಿದ್ದಾರೆ.

ಇದು ಈಶ್ವರಪ್ಪ ವಿರುದ್ಧ ನಡೆದ ಷಡ್ಯಂತ್ರ. ಇಂಥ ಷಡ್ಯಂತ್ರ ನಡೆಯುತ್ತೆ ಅನ್ನೋದನ್ನ ಕನಸು ಮನಸಿನಲ್ಲೂ ಊಹಿಸಿರಲಿಲ್ಲ. ಸಂತೋಷ್ ಜೀವಂತವಾಗಿದ್ದು ಹೋರಾಡಬೇಕಿತ್ತು. ಅನ್ಯಾಯ ಹೇಳಿಕೊಂಡಿದ್ದರೆ ತಪ್ಪು ಒಪ್ಪು ಗೊತ್ತಾಗುತ್ತಿತ್ತು. ಸತ್ತ ವ್ಯಕ್ತಿಯ ಸುತ್ತ ಸಾವಿರಾರು ಪ್ರಶ್ನೆಗಳು ಎದ್ದಿವೆ. ಇದರಲ್ಲಿ ಯಾರ್ಯಾರು ತಮ್ಮ ಬೇಲೆ ಬೇಯಿಸಿಕೊಳ್ಳುತ್ತಾರೋ ಗೊತ್ತಿಲ್ಲ. ಸಂತೋಷ್ ನಮ್ಮ ನೆರೆಯ ಜಿಲ್ಲೆಯವರೇ ಏನು ನೊಂದುಕೊಂಡಿದ್ದಾನೋ? ಏನಾಯ್ತೋ ದೇವರಿಗೆ ಗೊತ್ತು. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳೋದೆ ಆಗಿದ್ರೆ ತಮ್ಮ ಜಿಲ್ಲೆಯಲ್ಲೇ ಮಾಡಿಕೊಳ್ಳಬೇಕಿತ್ತು ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

36 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago