Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸುಮಲತಾ ಆಪ್ತರೇ ಸುಮಲತಾಗೆ ಕೈ ಕೊಡುತ್ತಾರಾ..? ಕುಮಾರಸ್ವಾಮಿ ಅವರನ್ನು ಭೇಟಿಯಾದ ಸಚ್ಚಿದಾನಂದ..!

---Advertisement---

 

ಬೆಂಗಳೂರು: ಮಂಡ್ಯ ಚುನಾವಣೆ ಎಂದಾಕ್ಷಣ ಎಲ್ಲರ ಕಣ್ಣು ಅರಳುತ್ತದೆ. ಅಲ್ಲಿ ಏನಾಗುತ್ತದೆ ಎಂಬ ಚರ್ಚೆ ಶುರುವಾಗುತ್ತದೆ. ಅದರಲ್ಲೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಚಿತ್ತ ಮಂಡ್ಯದತ್ತ ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಕಾರಣ, ಸುಮಲತಾ ಸ್ಪರ್ಧೆ ಅತಂತ್ರವಾಗಿ ಕಾಣುತ್ತಿದೆ. ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿಯಲ್ಲಿಯೇ ಇರುತ್ತಾರಾ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಿ, ಮತ್ತೆ ಮಂಡ್ಯ ಜನರ ಮನಸ್ಸು ಗೆಲ್ಲುತ್ತಾರಾ ಎಂಬ ಕುತೂಹಲವಿದ್ದೆ ಇರುತ್ತದೆ. ಇದರ ನಡುವೆ ಸುಮಲತಾ ಅವರ ಆಪ್ತ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಂದು ಸುಮಲತಾ ಆಪ್ತ ಸಚ್ಚಿದಾನಂದ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಆಪ್ತ ಸಮಾಲೋಚನೆ ನಡೆಸಿದ್ದಾರೆ. ಚರ್ಚೆಯಲ್ಲಿ ಏನಾಗಿದೆ ಎಂಬುದು ಇನ್ನು ತಿಳಿದಿಲ್ಲ. ಆದರೆ ಆ ಫೋಟೋ ಇಟ್ಟುಕೊಂಡು ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿರುವುದಂತು ಸತ್ಯ.

ಈ ಫೋಟೋ ನೋಡಿದ ಕೆಲವರು ಸುಮಲತಾ ಅವರಿಗೆ ಆಪ್ತರೇ ಕೈಕೊಡುತ್ತಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಈ ರೀತಿಯ ಬೆಳವಣಿಗೆಗಳು ನಡೆದಿದ್ದು ಸಾಕಷ್ಟು ಚರ್ಚೆಯಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಹಾಗೂ ಕುಮಾರಸ್ವಾಮಿ ಕುಟುಂಬದಲ್ಲಿ ನೇರಾ ನೇರ ಹಣಾಹಣಿ ಇತ್ತು. ಆಗ ನಿಖಿಲ್ ವಿರುದ್ಧ ಸವಾಲು ಹಾಕಿ, ಸುಮಲತಾ ಅವರ ಗೆಲುವಿಗೆ ಕಾರಣವಾದವರಲ್ಲಿ ಸಚ್ಚಿದಾನಂದ ಅವರ ಪಾತ್ರವೂ ಬಹಳ ದೊಡ್ಡದಿದೆ. ಹೀಗಿರುವಾಗ ಈಗ ಇದ್ದಕ್ಕಿದ್ದ ಹಾಗೇ ಅದೇ ಸಚ್ಚಿದಾನಂದ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾದರೆ ಅನುಮಾನಗಳು ಮೂಡುವುದಿಲ್ಲವೇ..?

ಜೊತೆಗೆ ಇನ್ನೊಂದು ವಿಚಾರ ಕೂಡ ಚರ್ಚೆಯಾಗುತ್ತಿದೆ. ಸುಮಲತಾ ಕೂಡ ಮಂಡ್ಯದಿಂದಾನೇ ನಿಲ್ಲುವುದು ಎಂಬ ನಿರ್ಧಾರ ಮಾಡಿದ್ದಾರೆ. ಹೀಗಾಗಿ ವೈರತ್ವವನ್ನು ಮರೆತು ದೋಸ್ತಿ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಾ ಇದೆಯಾ. ಅವರೇ ಏನಾದರೂ ಆಪ್ತರನ್ನು ಮುಂದೆ ಬಿಟ್ಟರಾ..? ಎಂಬ ಪ್ರಶ್ನೆಗಳು ಮೂಡಿದ್ದು, ಇದಕ್ಕೆಲ್ಲಾ ಉತ್ತರ ತಿಳಿಯಬೇಕಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment