Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾ ಆಪ್ತರೇ ಸುಮಲತಾಗೆ ಕೈ ಕೊಡುತ್ತಾರಾ..? ಕುಮಾರಸ್ವಾಮಿ ಅವರನ್ನು ಭೇಟಿಯಾದ ಸಚ್ಚಿದಾನಂದ..!

Facebook
Twitter
Telegram
WhatsApp

 

ಬೆಂಗಳೂರು: ಮಂಡ್ಯ ಚುನಾವಣೆ ಎಂದಾಕ್ಷಣ ಎಲ್ಲರ ಕಣ್ಣು ಅರಳುತ್ತದೆ. ಅಲ್ಲಿ ಏನಾಗುತ್ತದೆ ಎಂಬ ಚರ್ಚೆ ಶುರುವಾಗುತ್ತದೆ. ಅದರಲ್ಲೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಚಿತ್ತ ಮಂಡ್ಯದತ್ತ ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಕಾರಣ, ಸುಮಲತಾ ಸ್ಪರ್ಧೆ ಅತಂತ್ರವಾಗಿ ಕಾಣುತ್ತಿದೆ. ಕ್ಷೇತ್ರ ಬಿಟ್ಟುಕೊಟ್ಟು ಬಿಜೆಪಿಯಲ್ಲಿಯೇ ಇರುತ್ತಾರಾ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಿ, ಮತ್ತೆ ಮಂಡ್ಯ ಜನರ ಮನಸ್ಸು ಗೆಲ್ಲುತ್ತಾರಾ ಎಂಬ ಕುತೂಹಲವಿದ್ದೆ ಇರುತ್ತದೆ. ಇದರ ನಡುವೆ ಸುಮಲತಾ ಅವರ ಆಪ್ತ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಂದು ಸುಮಲತಾ ಆಪ್ತ ಸಚ್ಚಿದಾನಂದ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಆಪ್ತ ಸಮಾಲೋಚನೆ ನಡೆಸಿದ್ದಾರೆ. ಚರ್ಚೆಯಲ್ಲಿ ಏನಾಗಿದೆ ಎಂಬುದು ಇನ್ನು ತಿಳಿದಿಲ್ಲ. ಆದರೆ ಆ ಫೋಟೋ ಇಟ್ಟುಕೊಂಡು ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿರುವುದಂತು ಸತ್ಯ.

ಈ ಫೋಟೋ ನೋಡಿದ ಕೆಲವರು ಸುಮಲತಾ ಅವರಿಗೆ ಆಪ್ತರೇ ಕೈಕೊಡುತ್ತಿದ್ದಾರಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಈ ರೀತಿಯ ಬೆಳವಣಿಗೆಗಳು ನಡೆದಿದ್ದು ಸಾಕಷ್ಟು ಚರ್ಚೆಯಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಹಾಗೂ ಕುಮಾರಸ್ವಾಮಿ ಕುಟುಂಬದಲ್ಲಿ ನೇರಾ ನೇರ ಹಣಾಹಣಿ ಇತ್ತು. ಆಗ ನಿಖಿಲ್ ವಿರುದ್ಧ ಸವಾಲು ಹಾಕಿ, ಸುಮಲತಾ ಅವರ ಗೆಲುವಿಗೆ ಕಾರಣವಾದವರಲ್ಲಿ ಸಚ್ಚಿದಾನಂದ ಅವರ ಪಾತ್ರವೂ ಬಹಳ ದೊಡ್ಡದಿದೆ. ಹೀಗಿರುವಾಗ ಈಗ ಇದ್ದಕ್ಕಿದ್ದ ಹಾಗೇ ಅದೇ ಸಚ್ಚಿದಾನಂದ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾದರೆ ಅನುಮಾನಗಳು ಮೂಡುವುದಿಲ್ಲವೇ..?

ಜೊತೆಗೆ ಇನ್ನೊಂದು ವಿಚಾರ ಕೂಡ ಚರ್ಚೆಯಾಗುತ್ತಿದೆ. ಸುಮಲತಾ ಕೂಡ ಮಂಡ್ಯದಿಂದಾನೇ ನಿಲ್ಲುವುದು ಎಂಬ ನಿರ್ಧಾರ ಮಾಡಿದ್ದಾರೆ. ಹೀಗಾಗಿ ವೈರತ್ವವನ್ನು ಮರೆತು ದೋಸ್ತಿ ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಾ ಇದೆಯಾ. ಅವರೇ ಏನಾದರೂ ಆಪ್ತರನ್ನು ಮುಂದೆ ಬಿಟ್ಟರಾ..? ಎಂಬ ಪ್ರಶ್ನೆಗಳು ಮೂಡಿದ್ದು, ಇದಕ್ಕೆಲ್ಲಾ ಉತ್ತರ ತಿಳಿಯಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!