Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಅರ್ಹತೆ ಇದೆ: ದಲಿತ ಸಿಎಂ ವಿಚಾರ ಎತ್ತಿದ ಪ್ರಸನ್ನಾನಂದ ಸ್ವಾಮೀಜಿ

---Advertisement---

ಬಾಗಲಕೋಟೆ: ರಾಜ್ಯದಲ್ಲಿ ಈಗಾಗಲೇ ಸಿಎಂ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಅದರಲ್ಲೂ ದಲಿತ ಸಿಎಂ ವಿಚಾರ ಕೂಡ ಆಗಾಗ ಸದ್ದು ಮಾಡಿ, ಸುಮ್ಮನಾಗುತ್ತದೆ. ದಲಿತ ಸಿಎಂ ರೇಸ್ ನಲ್ಲಿ ಹಲವರಿದ್ದಾರೆ. ಇದೀಗ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ದಲಿತ ಸಿಎಂ ವಿಚಾರದ ಪರ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ದಲಿತರು ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ. ಅವರ ಬೆನ್ನಿಗೆ ನಾವೆಲ್ಲಾ ನಿಲ್ಲಲಿದ್ದೇವೆ. ಸಿಎಂ ಹುದ್ದೆ ಕೆಲವೇ ಸಮುದಾಯಗಳ ಸ್ವತ್ತಾ..? ಸಿಎಂ ಹುದ್ದೆಯನ್ನು ಯಾರಾದರೂ ಗುತ್ತಿಗೆ ಪಡೆದುಕೊಂಡಿದ್ದಾರಾ..? ದಲಿತರು ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸಿರುವ ಸ್ವಾಮೀಜಿ, ದಲಿತರು ಮತ ಬ್ಯಾಂಕ್ ಮಾತ್ರ ಆಗಿರಬೇಕಾ ಎಂದು ಕೇಳಿದ್ದಾರೆ. ದಲಿತರು ಸಿಎಂ ಆಗಲಿ ಎಂಬ ಔದಾರ್ಯ ಹೊಂದಿದ್ದರೆ ಹೇಗೆ..? ನಾಡಿನ ದೊರೆ ಸಿದ್ದರಾಮಯ್ಯ ಬಗ್ಗೆ ಬಹಳಷ್ಟು ಗೌರವವಿದೆ. ಸಾಮಾಜಿಕ ನ್ಯಾಯದ ಪರ ಇರಿವವರು ಸಿದ್ದರಾಮಯ್ಯ. ಎಲ್ಲೋ ಒಂದು ಕಡೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳು ಆದರೆ, ಆಗ ದಲಿತರು ಸಿಎಂ ಆಗಬೇಕೆಂದು ಬಯಸಿದ್ದಾರೆ.

ನಮ್ಮ ಹಾಗೂ ಕಾರ್ಯಕರ್ತರ ಆಶಯವಿರಬಹುದು. ಆದರೆ ಪಕ್ಷದ ತೀರ್ಮಾನ ಕೂಡ ಮುಖ್ಯವಾಗುತ್ತದೆ. ಪಕ್ಷ ದೊಡ್ಡದು. ಸತೀಶ್ ಜಾರಕಿಹೊಳಿ ಅವರು ಇದಕ್ಕಾಗಿ ಕಾಯಬೇಕು ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ಮತ್ತೊಮ್ಮೆ ಮುನ್ನಲೆಗೆ ತಂದಿದ್ದಾರೆ. ದಲಿತ ಸಿಎಂ ಆಗಲಿ ಅಂತ ಆಗಾಗ ಹೇಳುತ್ತಲೆ ಇರುತ್ತಾರೆ. ಇತ್ತಿಚೆಗಷ್ಟೇ ಸಚಿವ ಕೆ ಎನ್ ರಾಜಣ್ಣ ಕೂಡ, ಪರಮೇಶ್ವರ್ ಪರ ಬ್ಯಾಟ್ ಬೀಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...