Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿವೈ ವಿಜಯೇಂದ್ರ ಅವರನ್ನ ಭೇಟಿಯಾದ ಸತೀಶ್ ಜಾರಕಿಹೊಳಿ : ಬ್ಯಾಕ್ ಟು ಬ್ಯಾಕ್ ಕುತೂಹಲಕಾರಿ ನಡೆ..!

Facebook
Twitter
Telegram
WhatsApp

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಇದ್ದಕ್ಕಿದ್ದ ಹಾಗೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ. ಇದು ಕಾಂಗ್ರೆಸ್ ರಾಜಕಾರಣಿಗಳ ತಲೆಗೆ ಹುಳ ಬಿಟ್ಟಂತೆ ಆಗಿದೆ. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸದಲ್ಲಿ ವಿಜಯೇಂದ್ರ ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.‌

ಸಿಎಂ ಸಿದ್ದರಾಮಯ್ಯ ಅವರು ಮೂಡಾ ಕೇಸಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಹೀಗಾಗಿ ಬದಲಾವಣೆಯ ಕೂಗಿ ಜೋರಾಗಿಯೇ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ದಲಿತ ಸಿಎಂ ಚರ್ಚೆಯೂ ಮುನ್ನೆಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸತೀಶ್ ಜಾರಕಿಹೊಳಿ ಫುಲ್ ಆಕ್ಟೀವ್ ಆಗಿದ್ದಾರೆ. ಇತ್ತೀಚೆಗಷ್ಟೇ ತುಮಕೂರಿನಲ್ಲಿ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರು. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಅವರ ನಿವಾಸದಲ್ಲಿ ಗೌಪ್ಯ ಸಭೆಯನ್ನು ಮೂವರು ನಡೆಸಿದ್ದರು. ಈ ಎಲ್ಲಾ ನಡೆಗಳು ಕಾಂಗ್ರೆಸ್ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ. ಇದರ ಬೆನ್ನಲ್ಲೇ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು ಹೀಗೆ, ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿರುವ ಕುಟ್ರಳ್ಳಿ ಬಳು ಟೋಲ್ ತೆರವು ಮಾಡುವಂತೆ ಮನವಿ ಮಾಡಿದ್ದೇನೆ. ಈ ಟೋಲ್ ಬೇರೆಡೆ ಶಿಫ್ಟ್ ಮಾಡಲು ಮನವಿ ಮಾಡಿದ್ದೇನೆ. ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತದೆ. ಇದರಿಂದ ರೈತರಿಗೆ ಅನಾನುಕೂಲವಾಗಲಿದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ತೊಂರೆ ಆಗುತ್ತಿದೆ. ಟೋಲ್ ಶಿಫ್ಟ್ ಗೆ ಹೋರಾಟಗಳು ನಡೆದಿವೆ.‌ ಸಚಿವರು ಕೂಡ ಸಕಾರಾತ್ಮಕವಾಗಿ ಭರವಸೆ ನೀಡಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

error: Content is protected !!