ಅಭಿವೃದ್ಧಿ ಆಗಿಲ್ಲವೆಂದು ಸಾಬೀತುಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ : ಸತೀಶ್ ಜಾರಕಿಹೊಳಿಗೆ ರಮೇಶ್ ಜಾರಕಿಹೊಳಿ ಸವಾಲ್..!

suddionenews
1 Min Read

 

ಬೆಳಗಾವಿ: ಜಿಲ್ಲೆಯಲ್ಲಿ ಸಹೋದರರ ಸವಾಲು ಏರ್ಪಟ್ಟಿದೆ. ಸಚಿವ ಸತೀಶ್ ಜಾರಕಿಹೊಳಿಗೆ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎನ್ನುವುದನ್ನ ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದು ಸವಾಲು ಹಾಕಿದ್ದಾರೆ.

ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿಲ್ಲ ಎಂದಿದ್ದಾರೆ. ನಾನು ಸವಾಲು ಹಾಕುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜೀಯಿಲ್ಲ. ಅಭಿವೃದ್ಧಿ ಆಗಿಲ್ಲ ಎಂದಾದರೇ ನಾನು ರಾಜೀನಾಮೆ ನೀಡ್ತೇನೆ. ಇದನ್ನ ಅವರು ಸಾಬೀತು ಪಡಿಸಿದ್ರೆ ಸ್ಪಾಟಲ್ಲೇ ರಾಜೀನಾಮೆ ನೀಡ್ತೇನೆ. ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡ್ತೇನೆ ಎಂದು ಸೋದರನಿಗೆ ಸವಾಲು ಹಾಕಿದ್ದಾರೆ.

ಇನ್ನು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರು ಹೊಸ ಬಾಂಬ್ ಸಿಡಿಸುತ್ತಲೆ ಇದ್ದಾರೆ. ನಮ್ಮ ಸಂಪರ್ಕದಲ್ಲಿ ಬಿಜೆಪಿ ನಾಯಕರಿದ್ದಾರೆ ಎಂದು. ಈ ವಿಚಾರವಾಗಿಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *