Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಡಿ ನಿರ್ದೇಶಕ ಸಂಜಯ್ ಮಿಶ್ರಾ ಸೇವಾವಧಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ..!

---Advertisement---

 

 

ನವದೆಹಲಿ: ಇಡಿ ನಿರ್ದೇಶಕ ಸಂಜಯ್ ಮಿಶ್ರಾಗೆ ಕೇಂದ್ರ ಸರ್ಕಾರ ಸೇವಾವಧಿಯನ್ನು ಮುಂದುವರೆಸಿತ್ತು. ಈ ಸಂಬಂಧ ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟ ಮಾಡಿದೆ. ಸೇವಾವಧಿ ವಿಸ್ತರಣೆ‌ ಮಾಡಿರುವುದು ಅಕ್ರಮ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕಳೆದ ವರ್ಷ ನೀಡಿದ್ದ ಸೇವಾವಧಿ ಕಾನೂನು ಬಾಹಿರವಾಗಿದೆ ಎಂದು ತೀರ್ಪು ನೀಡಿದೆ.

ಇದೀಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಮುಜುಗರವಾಗಿದೆ. ಇಡಿ ಅಂದ್ರೆ ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಗಳಲ್ಲಿ ಒಂದು. ಇದು ಆರ್ಥಿಕ ಕಾನೂನುಗಳನ್ನು ಜಾರಿ ಮಾಡುವ ಹಾಗೂ ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವಂತೆ ಕರ್ತವ್ಯ ನಿರ್ವಹಿಸುತ್ತದೆ.

ಕೇಂದ್ರ ಸರ್ಕಾರ ಇಡಿ ನಿರ್ದೇಶಕರಾಗಿದ್ದ ಸಂಜಯ್ ಮಿಶ್ರಾಗೆ ಸೇವಾವಧಿಯನ್ನು ವಿಸ್ತರಣೆ‌ ಮಾಡಿತ್ತು. ಕಳೆದ ವರ್ಷ ನೀಡಿದ್ದ ಸೇವಾವಧಿ ಕಾನೂನು ಬಾಹಿರ. ಮೂರನೇ ಸೇವಾವಧಿ ವಿಸ್ತರಣೆ ತಪ್ಪು ಎಂದು ಹೇಳಿರುವ ಸುಪ್ರೀಂ ಕೋರ್ಟ್ ಜುಲೈ 31ರವರೆಗೂ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡಿದೆ. ಈ ಮೂಲಕ ಸುಪ್ರೀಂ ಕೋರ್ಟ್ ಇನ್ನು 15 ದಿನದ ಒಳಗಾಗಿ ನೂತನ ಇಡಿ ನಿರ್ದೇಶಕರನ್ನು ನೇಮಕ ಮಾಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...