ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 7899864552
ಸುದ್ದಿಒನ್, ಚಿತ್ರದುರ್ಗ, ಮೇ. 29 : ಒಂದರಿಂದ ಹತ್ತನೇ ತರಗತಿ ಶಾಲೆಗಳು ಗುರುವಾರದಿಂದ ಆರಂಭಗೊಂಡಿದ್ದು, ಎಲ್ಲೆಡೆ ಶಾಲೆಗಳಿಗೆ ತಳಿರು ತೋರಣಗಳನ್ನು ಕಟ್ಟಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು.
ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೈಯದ್ ಇಸ್ಮಾಯಿಲ್ ಮಕ್ಕಳಿಗೆ ಬಲೂನ್ ಹಾಗೂ ಗುಲಾಬಿ ಹೂಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡು ಮಾತನಾಡುತ್ತ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್ ಗಳನ್ನು ನೀಡಲಾಗುತ್ತಿದೆ. ಅದೇ ರೀತಿಯ ಉರ್ದು ಶಾಲೆಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕಾಗಿರುವುದರಿಂದ ಸರ್ಕಾರ ಮುತುವರ್ಜಿ ವಹಿಸಿ ಬಲವರ್ಧನೆಗೊಳಿಸಬೇಕೆಂದು ಮನವಿ ಮಾಡಿದರು. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಮಯ್ಯಭಾನು, ಶಿಕ್ಷಕಿಯರುಗಳಾದ ಲತಾ, ಉಮ, ಫಾತಿಮ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











