ಸುದ್ದಿಒನ್, ಚಿತ್ರದುರ್ಗ, ಜುಲೈ. 19 : ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಂದು 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಚುನಾವಣೆ ನಡೆಸಲಾಯಿತು.
ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ರಾಜಕೀಯ ಆಡಳಿತ ಹಾಗೂ ಶೈಕ್ಷಣಿಕ ಆಡಳಿತ ಸಾಂಸ್ಕೃತಿಕ ಆಡಳಿತ ಹೇಗಿರಬೇಕೆಂಬ ಪರಿಕಲ್ಪನೆ ಯೊಂದಿಗೆ ಪ್ರಜಾ ಪ್ರಭುತ್ವದ ಪರಿಕಲ್ಪನೆ ಮೂಡಿಸುವ ನಿಟ್ಟಿನಲ್ಲಿ ಈವಿಎಂ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಯಿತು. ಪ್ರತಿ ಮಗು ತನಗೆ ಇಷ್ಟ ಬಂದ ವ್ಯಕ್ತಿಗೆ ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ಮಾಡಿ ನಮ್ಮ ಶಾಲೆಗೆ ಅಗತ್ಯವಿರುವ ಪ್ರತಿನಿಧಿಗಳನ್ನು ಆರಿಸಲಾಯಿತು. ಅದರಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಮಂತ್ರಿ, ಸೇರಿದಂತೆ ವಿವಿಧ ಖಾತೆಗಳಿಗೆ ಮಕ್ಕಳನ್ನು ಆಯ್ಕೆ ಮಾಡಲಾಯಿತು.

ಮುಖ್ಯ ಶಿಕ್ಷಕರಾದ ದಿನೇಶ್ ರೆಡ್ಡಿ ಮಾತನಾಡುತ್ತಾ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದಲ್ಲಿ ಅವರಿಗೆ ಮತದಾನದ ಪರಿಕಲ್ಪನೆ ಅವಶ್ಯಕತೆ ಇದೆ. ನಾವು ಯೋಗ್ಯರನ್ನು ಆರಿಸುವುದರಿಂದ ನಮಗೆ ಒಳ್ಳೆಯ ಆಡಳಿತ ಸಿಗುವಂತಾಗುತ್ತದೆ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಿನೇಶ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಹರೀಶ್ ಮತ್ತು ಶಾಲೆಯ ಚುನಾವಣಾ ಪ್ರಕ್ರಿಯೆಯನ್ನು ಶಾಲೆಯ ಹಿರಿಯ ಶಿಕ್ಷಕರಾದ ಎಚ್. ರುರ್ದ್ರಪ್ಪ, ಸುದರ್ಶನ್, ಕೆ.ರೇವಣ್ಣ ಹಾಗೂ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ, ಶ್ರೀಮತಿ ಸುವರ್ಣಮ್ಮ, ಶ್ರೀಮತಿ ಕುಸುಮ, ಶ್ರೀಮತಿ ರಿಟಾಮಣಿ, ಶ್ರೀಮತಿ ವೀಣಾ, ಶ್ರೀಮತಿ ಸಿದ್ದಮ್ಮ, ಶ್ರೀಮತಿ ತ್ರಿವೇಣಿ ಹಾಗೂ ಕಾರ್ಯಕ್ರಮದ ರೂವಾರಿ ಶಿಕ್ಷಕರುಗಳಾದ ಅರುಣ್ ಕುಮಾರ್, ಅಣ್ಣಪ್ಪ ಸ್ವಾಮಿ, ಬಸವರಾಜ್ ಹಾಗೂ ಮಕ್ಕಳು ಭಾಗವಹಿಸಿದ್ದರು.



