Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಸಂಸತ್ ಚುನಾವಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 26 : ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಗುರುವಾರ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.
ಎಂಟನೆ ತರಗತಿಯಿಂದ ಏಳು ವಿದ್ಯಾರ್ಥಿನಿಯರು, ಒಂಬತ್ತನೆ ತರಗತಿಯಿಂದ ಐದು ವಿದ್ಯಾರ್ಥಿನಿಯರು ಹಾಗೂ ಹತ್ತನೆ ತರಗತಿಯಿಂದ ಆರು ವಿದ್ಯಾರ್ಥಿನಿಯರು ಚುನಾವಣೆಗೆ ಸ್ಪರ್ಧಿಸಿದ್ದರು.

ಬೆಳಿಗ್ಗೆ ಹನ್ನೊಂದರಿಂದ ಮಧ್ಯಾಹ್ನ 1-30 ರವರೆಗೆ ನಡೆದ ಚುನಾವಣೆಯಲ್ಲಿ 425 ವಿದ್ಯಾರ್ಥಿನಿಯರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಪ್ರಭು ಪ್ರಸಾದ್ ಚುನಾವಣಾಧಿಕಾರಿಯಾಗಿದ್ದರು. ಉಪ ಪ್ರಾಚಾರ್ಯರಾದ ಕರಿಯಪ್ಪ ಚುನಾವಣಾ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದರು. ನೋಡಲ್ ಅಧಿಕಾರಿಯಾಗಿ
ಎನ್.ಕೃಷ್ಣಮೂರ್ತಿ ಚುನಾವಣೆಯನ್ನು ನಡೆಸಿಕೊಟ್ಟರು.
ಆರ್.ಎಂ.ಮಹಮದ್‍ಖಾನ್, ವಿಜಯಕುಮಾರ್, ಫಹಿಮುನ್ನಿಸಾ ಇವರುಗಳು ವೀಕ್ಷಕರಾಗಿ ಚುನಾವಣೆಯನ್ನು ಸುಸೂತ್ರವಾಗಿ ನಡೆಸಿದರು.

ಕೀರ್ತನ ಎಸ್. ಹರ್ಷಿಯಾಭಾನು, ಅಮೂಲ್ಯ ಎಂ, ಮದಿಹಾಭಾನು, ಉಷಾ ಜಿ, ಸಂಧ್ಯಾ ಟಿ, ಇಂಚರ ಸಿ, ಕಾವ್ಯ ಆರ್, ಹರ್ಷಿತ ಎಂ, ಸಿಂಚನ ಎ, ಹೀನಾ ಕೌಸರ್
ಸೈಯದಾ ಅಫ್ರ್ರತಾಜ್, ಅಂಕಿತ ಎನ್, ಜೇಷ್ಠ ಕೆ.ಎಸ್, ಸಮಂತಾ ಆರ್ ಇವರುಗಳು ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದರು. ವಿರೋಧ ಪಕ್ಷದ ನಾಯಕರಾಗಿ ಅಪೂರ್ವ ಎಂ. ನೇಮಕಗೊಂಡರು. ನೋಟಾ ಬಗ್ಗೆ ವಿದ್ಯಾರ್ಥಿನಿಯರಿಗೆ ಪರಿಚಯಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...