ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನಾಯಕನಹಟ್ಟಿ, ಜೂನ್.28 : ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024- 25ನೇ ಸಾಲಿನ ವಿದ್ಯಾರ್ಥಿಗಳಲ್ಲಿ ಚುನಾವಣೆ ಬಗ್ಗೆ ಅರಿವು ಮೂಡಿಸಲು ಮೊಬೈಲ್ ಆ್ಯಪ್ ಇವಿಎಂ ಅಪ್ಲಿಕೇಶನ್ ಬಳಸಿ ಶುಕ್ರವಾರ ಶಾಲಾ ವಿದ್ಯಾರ್ಥಿ ಸಂಸತ್ ಚುನಾವಣೆ ವಿನೂತವಾಗಿ ನಡೆಸಲಾಯಿತು.
ನಾಮಪತ್ರ ಸಲ್ಲಿಸುವಿಕೆ, ಪರಿಶಿಲನೆ, ಹಿಂತೆಗೆದುಕೊಳ್ಳುವಿಕೆ, ಚುನಾವಣಾ ಪ್ರಚಾರ, ಚುನಾವಣೆ, ಮತ ಎಣಿಕೆ ಸೇರಿದಂತೆ ಪ್ರತಿಯೊಂದಕ್ಕೂ ಚುನಾವಣಾ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ನಾಮಪತ್ರ ತುಂಬಿ ರು.20 ಠೇವಣಿ ಭರಿಸಿ ಮುಖ್ಯ ಚುನಾವಣಾಧಿಕಾರಿ ಎನ್.ಇಂದಿರಮ್ಮ ಅವರಿಗೆ ಸಲ್ಲಿಸಿದ್ದರು.
ಮೊದಲ ಮತದಾನದ ಅಧಿಕಾರಿ ಮತದಾರರ ಗುರುತು ದಾಖಲಿಸಿದರೆ, ಎರಡನೇ ಅಧಿಕಾರಿ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಿದರು. ಮತ್ತೊಬ್ಬ ಅಧಿಕಾರಿ ಮತದಾರರ ನೊಂದಣಿ ಪುಸ್ತಕದಲ್ಲಿ ಸಹಿ ಪಡೆದು ಮತ ಚಲಾಯಿಸಲು ಅನುವು ಮಾಡಿಕೊಟ್ಟರು. ಸಂಸದೀಯ ಮಾದರಿಯಲ್ಲಿ ಮೊಬೈಲ್ ಆ್ಯಪ್ ಇವಿಎಂ ತಂತ್ರಜ್ಞಾನ ಬಳಸಿ ಪ್ರತ್ಯೇಕ ವಿಭಾಗದಲ್ಲಿ ಇರಿಸಲಾಗಿದ್ದ ಬ್ಯಾಲೆಟ್ ಯೂನಿಟ್ನಲ್ಲಿ ಮಕ್ಕಳು ತಮ್ಮ ಆಯ್ಕೆಯ ಅಭ್ಯರ್ಥಿಯ ಎದುರಿನ ನೀಲಿ ಗುಂಡಿ ಒತ್ತಿ ಮತ ಚಲಾಯಿಸಿದರು.
ನಂತರ ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಎಣಿಸಲಾಯಿತು. ಐದನೇ ತರಗತಿಯ ಐವರು ವಿದ್ಯಾರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇವರಲ್ಲಿ ಇಬ್ಬರು ವಿಜೇತರಾದರು. ಆರನೇ ತರಗತಿಯಲ್ಲಿ ಎಂಟು ವಿದ್ಯಾರ್ಥಿಗಳು ಸ್ಪರ್ಧಿಸಿದ್ದರು. ಇವರಲ್ಲಿ ನಾಲ್ವರು ವಿಜೇತರಾದರು. ಏಳನೇ ತರಗತಿಯಲ್ಲಿ 8 ವಿದ್ಯಾರ್ಥಿಳು ಸ್ಪರ್ಧಿಸಿದ್ದರು, ಇವರಲ್ಲಿ ನಾಲ್ವರು ವಿದಾರ್ಥಿಗಳು ವಿಜೇತರಾದರು.
ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಋತ್ವಿಕ್, ಉಪನಾಯಕಿಯಾಗಿ ಗೀತಾ ಆಯ್ಕೆಯಾದರು.
ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ಶಾಲೆಯ ಹಿರಿಯ ಮುಖ್ಯಶಿಕ್ಷಕಿ ಎನ್.ಇಂದಿರಮ್ಮ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿರುವ ಚುನಾವಣೆಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಮೂಲಕ ನಾಯಕತ್ವ ಗುಣ ಬೆಳೆಸುವ ದಿಸೆಯಲ್ಲಿ ಶಾಲಾ ಸಂಸತ್ತು ಸಹಕಾರಿಯಾಗಿದೆ. ಪಠ್ಯದಲ್ಲಿ ಚುನಾವಣೆ ಪ್ರಕ್ರಿಯೆ ಕುರಿತು ಓದುವುದಕ್ಕಿಂತ ಇಂದು ಪ್ರಾತ್ಯಕ್ಷಿಕವಾಗಿ ವಿದ್ಯಾರ್ಥಿಗಳು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಭವಿಷ್ಯತ್ತಿನಲ್ಲಿ ಎದುರಿಸುವ ಚುನಾವಣೆಗಳ ಬಗ್ಗೆ ಅರಿವು ಮೂಡಿಸಿದಂತಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಮಲತಾ, ಸದಸ್ಯರಾದ ವಾಣಿಶ್ರೀ, ಎನ್.ಮಾರುತಿ, ಶಿಕ್ಷಕರಾದ ಎಂ.ವಿ.ಯತೀಶ್, ಎಚ್.ಟಿ.ಮಂಜುಳಮ್ಮ, ಎನ್.ಸುಮಿತ್ರ, ಡಿ.ಕೃಷ್ಣಾರೆಡ್ಡಿ, ಜಿ.ಗಾಯಿತ್ರಿದೇವಿ, ಕೆ.ಎಲ್ ಉಷಾ, ಬಿ.ಎಂ.ಶಿಲ್ಪಾ, ಬಿ.ಕೆ.ಸುಮಾ, ಎಚ್.ಮಂಜುನಾಥ, ಜಿ.ಪಿ.ಚಂದನ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್