ಜಮ್ಮು ಕಾಶ್ಮೀರದಲ್ಲಿ ಹಿಂದೂ ಶಿಕ್ಷಕಿಯ ಹತ್ಯೆ..!

ಜಮ್ಮು ಕಾಶ್ಮೀರ: ಇಲ್ಲಿನ ಕುಲ್ಗಾಮ್ ನಲ್ಲಿ ಹಿಂದೂ ಶಿಕ್ಷಕಿಯನ್ನು ಗುರಿಯಾಗಿಸಿಕೊಂಡು ಉಗ್ರರು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ಶಿಕ್ಷಕಿಯನ್ನು ರಾಜ್ ನಿ ಬಲ್ಲಾ ಎಂದು ಗುರುತಿಸಲಾಗಿದೆ. ಇಲ್ಲಿನ ಉಗ್ರರು ಹಿಂದೂಗಳನ್ನು ಗುರುತಿಸಿ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಾಗಿವೆ. ಇದು ಈಗಲೂ ಹೆಚ್ಚಾಗಿದೆ. ಕುಲ್ಗಾಮ್ ಗೋಪಾಲಪುರ ಪ್ರದೇಶದಲ್ಲಿನ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಶಿಕ್ಷಕಿಯ ಪ್ರಾಣ ಉಳಿದಿಲ್ಲ. ಶಿಕ್ಷಕಿ ಕೊಂದ ಉಗ್ರರನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಪೊಲೀಸರು ಆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಉಗ್ರಗಾಮಿಗಳು ಅವರ ಕಚೇರಿಯಲ್ಲಿಯೇ ಕೊಂದಿದ್ದರು. ಇಸ್ಲಾಂ ಧರ್ಮಕ್ಕೆ ವಿರೋಧ ಎಂದು ಕುರುತೆರೆ ನಟಿ ಅಮ್ರಿನಾ ಭಟ್ ನನ್ನು ಕೊಂದು ಹಾಕುದ್ದಾರೆ. ಇಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಪ್ರಕರಣಕ್ಕೆ ಕಡಿವಾಣವೇ ಬಿದ್ದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *