Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜ್ಞಾನ ಕಾರ್ಯಾಗಾರಗಳು ಶಿಕ್ಷಕರ ಜ್ಞಾನ ಸಂಪತ್ತನ್ನು ಹೆಚ್ಚಿಸುತ್ತವೆ : ಬಿಇಒ ಸುರೇಶ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ವಿಜ್ಞಾನ ಕಾರ್ಯಾಗಾರಗಳು ಶಿಕ್ಷಕರ ಜ್ಞಾನ ಸಂಪತ್ತನ್ನು ಹೆಚ್ಚಿಸುತ್ತವೆ. ಆತ್ಮವಿಶ್ವಾಸ, ಸೃಜನಶೀಲತೆಯಂತಹ ಸಾಮರ್ಥ್ಯವನ್ನು ತುಂಬುವುದರೊಂದಿಗೆ ಶಿಕ್ಷಕರ ಮನಸ್ಸನ್ನು ಹರಿತಗೊಳಿಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮೂಡಿಸುತ್ತವೆ” ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ಶನಿವಾರ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಚಿತ್ರದುರ್ಗ, ಶಾಲಾ ಶಿಕ್ಷಣ ಇಲಾಖೆ, ರೋಟರಿ ಕ್ಲಬ್, ಹೊಂಗಿರಣ ವಿದ್ಯಾ ಸಂಸ್ಥೆ ಹಾಗೂ ಚಳ್ಳಕೆರೆ ವಿಜ್ಞಾನ ಕ್ಲಬ್ ಗಳ ಸಹಯೋಗದಲ್ಲಿ ಪ್ರೌಢಶಾಲಾ ಶಿಕ್ಷಕರಿಗಾಗಿ ನಡೆದ ವಿಜ್ಞಾನ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅವರು ಮುಂದುವರೆದು ಮಾತನಾಡಿ, “ಎಸೆಸೆಲ್ಸಿ ಫಲಿತಾಂಶ ಉತ್ತಮಪಡಿಸಲು ಶಿಕ್ಷಕರಿಗೆ ಕಾರ್ಯಾಗಾರಗಳು ತುಂಬಾ ಉಪಯುಕ್ತ. ಈ ಬಾರಿ ಉತ್ತಮ ಫಲಿತಾಂಶ ತರಲು ಪ್ರಯತ್ನಿಸಿ ಎಂದು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಎಚ್.ಎಸ್.ಟಿ.ಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ” ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ನಮ್ಮ ಸಂಸ್ಥೆ ಅನೇಕ ವೈಜ್ಞಾನಿಕ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಅಧ್ಯಕ್ಷರಾದ ಡಾ.ಜಿ.ಎನ್. ಮಲ್ಲಿಕಾರ್ಜುನಪ್ಪ ಮಾತನಾಡಿ, ಮನುಷ್ಯರನ್ನು ಮಾನವ ಸಂಪನ್ಮೂಲವನ್ನಾಗಿ ಪರಿವರ್ತಿಸುವುದು ವಿಜ್ಞಾನ ಶಿಕ್ಷಕರ ಪ್ರಮುಖ ಆದ್ಯತೆಯಾಗಬೇಕು. ವಿಜ್ಞಾನವನ್ನು ಬದುಕಿನ ಮಾರ್ಗವಾಗಿ ಕಲಿಸಬೇಕಾದ ಅವಶ್ಯಕತೆಯಿದೆ ಎಂದು ತಿಳಿಸಿದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದ ವಿಜ್ಞಾನ ವಿಷಯ ಪರಿವೀಕ್ಷಕರಾದ ಶ್ರೀ ಎಚ್.ಗೋವಿಂದಪ್ಪ, ಸಾಹಿತಿ ಶಿವಲಿಂಗಪ್ಪ, ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ನಾಗೇಶ್, ಹೊಂಗಿರಣ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್.ನಾಗೇಶ್, ಸಂಸ್ಥೆಯ ಖಜಾಂಚಿಗಳಾದ ಶ್ರೀ ಕೆ.ವಿ.ನಾಗಲಿಂಗರೆಡ್ಡಿ, ವಿಜ್ಞಾನ ಕ್ಲಬ್ ಅಧ್ಯಕ್ಷರಾದ ಎನ್ .ಬಸವರಾಜ್ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕರಾದ ಮಂಜುನಾಥ್ ಸ್ವಾಗತಿಸಿ, ರಾಜ್ಯಪ್ರಶಸ್ತಿ ಶಿಕ್ಷಕ ನಾಗಭೂಷಣ್ ಕಾರ್ಯಕ್ರಮ ನಿರೂಪಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment