SDA ನೌಕರ ಆತ್ಮಹತ್ಯೆ : PA ಹೆಸರು ಕೇಳಿ ಬಂದಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..?

ಬೆಳಗಾವಿ: ರುದ್ರಣ್ಣ ಆತ್ಮಹತ್ಯೆ ಕೇಸಲ್ಲಿ ಸಚಿವೆ ಲಕ್ಷ್ಮೀ ಹೆಬ್ವಾಳ್ಕರ್ ಪಿಎ ಹೆಸರು ಕೇಳಿ ಬಂದಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ಈ ಘಟನೆ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ಘಟನೆಗಳು ನಡೆಯಬಾರದು. ನಿನ್ನೆ ಮಾಧ್ಯಮದಲ್ಲಿ ನೋಡಿದಾಗಲೇ ಈ ವಿಚಾರ ಗೊತ್ತಾಗಿದ್ದು. ಸ್ವಲ್ಪ ಬ್ಯುಸಿ ಇದ್ದ ಕಾರಣ. ತನಿಖೆ ನಡೀತಾ ಇದೆ.

ಅದರ ಬಗ್ಗೆ ನನಗೆ ಏನು ಗೊತ್ತಿಲ್ಲ. ಮಾಧ್ಯಮದ ಸಹೋದರರಿಗೆ ರುದ್ರಣ್ಣ ಎಂಬುವವರು ಫೋನ್ ಮಾಡಿ, ಇದರ ಬಗ್ಗೆ ಮೇಡಂರಿಗೆ ಗಮನಕ್ಕಿಲ್ಲ ಎಂದು ಅವರೇ ಮಾತಾಡಿರುವುದನ್ನು ಮೀಡಿಯಾದವರು ಪ್ರಸಾರ ಮಾಡಿರೋದನ್ನ ನೋಡಿದ್ದೀನಿ. ನಾನ್ಯಾವತ್ತು ಅವರನ್ನು ಭೇಟಿಯಾಗಿಲ್ಲ. ಯಾವುದೇ ಒಂದು ಕೆಲಸಕ್ಕೂ ಕೂಡ ಅವರನ್ನ ಸಂಪರ್ಕ ಮಾಡಿಲ್ಲ. ವೈಯಕ್ತಿಕವಾಗಿಯೂ ಅವರನ್ನು ಭೇಟಿಯಾಗಿಲ್ಲ. ಈಗ ಏನಾಗಿದೆ ಅನ್ನೋದು ಪ್ರಾಥಮಿಕವಾಗಿ ತನಿಖೆ ನಡೀತಾ ಇದೆ.

ಮಂತ್ರಿಗಳು ಅಂದ್ಮೇಲೆ 10-15 ಪಿಎಗಳು ಇರ್ತಾರೆ. ಪ್ರತಿಯೊಬ್ಬರು ಕೂಡ ನಾವು ಹೇಳಿರುವಂತ ಕ್ಷೇತ್ರದ ಕೆಲಸಗಳನ್ನು ಆಗಬೇಕು ಎಂಬ ವಿಚಾರಕ್ಕೆ ಪಿಎ ಗಳನ್ನ ನೇಮಿಸಿರುತ್ತೇವೆ. ಸದ್ಯಕ್ಕೆ ಏನನ್ನು ಹೇಳುವುದಕ್ಕೆ ಬಯಸುವುದಿಲ್ಲ. ಇದು ತನಿಖೆಯ ಹಂತದಲ್ಲಿದೆ. ನಾನೊಬ್ಬ ಮಂತ್ರಿಯಾಗಿ, ಅದರಲ್ಲೂ ಒಂದು ಜವಾವ್ದಾರಿಯುತ ಸ್ಥಾನದಲ್ಲಿರುವ ಮಹಿಳೆಯಾಗಿ ಆ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ, ಸಾಂತ್ವಾನ ಹೇಳುತ್ತೇನೆ. ಮತ್ತೆ ನಿಷ್ಪಕ್ಷಪಾತವಾಗಿ ಈ ತನಿಖೆ ನಡೆಯಲಿ ಎಂದೇ ಬಯಸುತ್ತೇನೆ. ನಿರಂತರವಾಗಿ ನಾನು ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳ ಸಂಪರ್ಕದಲ್ಲಿದ್ದೇನೆ. ಊಹಾ ಪೋಹಗಳು ಶುರುವಾದರೆ ಹೆಚ್ಚಾಗುತ್ತಲೆ ಇರುತ್ತದೆ. ಹೀಗಾಗಿ ಕೂಲಂಕುಷವಾಗಿ ತನಿಖೆ ನಡೆಸಿ, ಬೇಗ ಸತ್ಉಅಸತಚಯತೆ ಹೊರಗೆ ಬರಬೇಕು. ಹಾಗೂ ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದೇ ನಮ್ಮ ಆಸೆ ಕೂಡ ಎಂದಿದ್ದಾರೆ.

suddionenews

Recent Posts

IND vs PAK: ಕೆಲಹೊತ್ತಿನಲ್ಲಿ ಭಾರತ-ಪಾಕ್ ಪಂದ್ಯ : ದುಬೈನಲ್ಲಿ ಹವಾಮಾನ ಹೇಗಿದೆ ? ಪಿಚ್ ವರದಿಯ ಸಂಪೂರ್ಣ ಮಾಹಿತಿ ಇಲ್ಲಿದೆ…!

ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…

3 hours ago

ಒಂದು ಕಪ್ ಬ್ಲಾಕ್ ಕಾಫಿಯಿಂದ ಹಲವು ಆರೋಗ್ಯ ಪ್ರಯೋಜನಗಳು..!

  ಸುದ್ದಿಒನ್ ಬ್ಲಾಕ್ ಕಾಫಿ ಹೃದಯದ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಟೈಪ್ -2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.…

4 hours ago

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ

ಈ ರಾಶಿಯವರಿಗೆ ವ್ಯಾಪಾರದಲ್ಲಿ ತುಂಬಾ ಅಡಚಣೆ, ಈ ರಾಶಿಗಳ ಮದುವೆಗೆ ತುಂಬಾ ಅಡಚಣೆ, ಭಾನುವಾರ ರಾಶಿ ಭವಿಷ್ಯ 23 ಫೆಬ್ರವರಿ…

7 hours ago

ಚಿತ್ರದುರ್ಗ : ನಾಲ್ವರು ಶ್ರೀಗಂಧದ ಕಳ್ಳರ ಬಂಧನ : 7.78 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ

    ಸುದ್ದಿಒನ್, ಹಿರಿಯೂರು, ಫೆಬ್ರವರಿ. 22 : ಅಬ್ಬಿನಹೊಳೆ ಮತ್ತು ಹೊಸದುರ್ಗ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀಗಂಧ…

14 hours ago

ಮಹಾರಾಷ್ಟ್ರದ ಸಾರಿಗೆ ಬಸ್ ಮತ್ತು ನಿರ್ವಾಹಕನಿಗೆ ಮಸಿ : ಚಿತ್ರದುರ್ಗದಲ್ಲಿ 8 ಮಂದಿ ಪೊಲೀಸರ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 22 : ಮಹಾರಾಷ್ಟ್ರದಲ್ಲಿ ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನ ನಿರ್ವಾಹಕನಿಗೆ ಮರಾಠಿಗರು ಕನ್ನಡದಲ್ಲಿ ಟಿಕೆಟ್ ಕೇಳಿದ…

16 hours ago