Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡನೇ ದಸರಾ ಖ್ಯಾತಿಯ ಚಿತ್ರದುರ್ಗದ ಶರಣ ಸಂಸ್ಕೃತಿ ಉತ್ಸವ-2023 : ಅಕ್ಟೋಬರ್ 21 ರಿಂದ 25 ರವರೆಗೆ ಸರಳ ಆಚರಣೆ : ಶ್ರೀ ಬಸವಪ್ರಭು ಸ್ವಾಮೀಜಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,  ಅಕ್ಟೋಬರ್.16 :  ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು ಶರಣಸಂಸ್ಕøತಿ ಉತ್ಸವ-2023ರ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಶ್ರೀಮಠದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವಪ್ರಭು ಸ್ವಾಮಿಗಳು, ಈ ಉತ್ಸವವು ನಾಡಿನಲ್ಲಿ ಎರಡನೇ ದಸರಾ ಎಂದೇ ಖ್ಯಾತಿ ಪಡೆದಿದೆ. ಈ ಬಾರಿ ದಿನಾಂಕ 21-10-23 ರಿಂದ 25-10-23ರವರೆಗೆ ಸರಳವಾಗಿ ಆಯೋಜಿಸಲಾಗಿದ್ದು, ಪ್ರತಿದಿನ ದಾಸೋಹ ನಡೆಯುತ್ತದೆ. ಮುರುಗಿ ಶಾಂತವೀರ ಸ್ವಾಮಿಗಳ ಭಾವಚಿತ್ರವನ್ನು ಇಟ್ಟು ಶೂನ್ಯಪೀಠಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು.

ಅಕ್ಟೋಬರ್ 21ರಂದು ಬೆಳಗ್ಗೆ 10.00 ಗಂಟೆಗೆ ಬಸವತತ್ತ್ವ ಧ್ವಜಾರೋಹಣದೊಂದಿಗೆ ಪ್ರಾರಂಭವಾಗುವ ಉತ್ಸವದ ಕಾರ್ಯಕ್ರಮಗಳು, ಅದೇದಿನ ಬೆಳಗ್ಗೆ 11 ಗಂಟೆಗೆ ಕೃಷಿಮೇಳ, ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ನಡೆಯಲಿದ್ದು, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ. ಸಂಜೆ 6.30ಕ್ಕೆ ನಡೆಯುವ ಬಸವತತ್ತ್ವ ಸಮಾವೇಶದಲ್ಲಿ ಸಚಿವರಾದ ಡಿ. ಸುಧಾಕರ್, ಈಶ್ವರ ಖಂಡ್ರೆ, ಚಿತ್ರನಟ ದೊಡ್ಡಣ್ಣ, ಶಾಸಕರಾದ ಬಿ.ಜಿ. ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ ಮುಂತಾದವರು ಭಾಗವಹಿಸುವರು.

ಅಕ್ಟೋಬರ್  22ರಂದು ಬೆಳಗ್ಗೆ 10ಕ್ಕೆ ಮಹಿಳಾ ಕ್ರೀಡಾಕೂಟ, ಸಂಜೆ 6.30 ಗಂಟೆಗೆ ಯುವಜನ ಸಮಾವೇಶ ನಡೆಯಲಿದ್ದು, ಕೇಂದ್ರಸಚಿವ ಭಗವಂತ ಖೂಬ, ರಾಜ್ಯಸಚಿವರಾದ ಎಂ.ಬಿ.ಪಾಟೀಲ, ಬಿ. ನಾಗೇಂದ್ರ, ಶಾಸಕ ಬಿ.ವೈ. ವಿಜಯೇಂದ್ರ ಮೊದಲಾದವರು ಭಾಗವಹಿಸುವರು.

ಅಕ್ಟೋಬರ್ 23ರಂದು ಸಂಜೆ 6.30 ಗಂಟೆಗೆ ನಡೆಯುವ ಮಹಿಳಾ ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕಿ ಶಶಿಕಲಾ ಜೊಲ್ಲೆ ಮೊದಲಾದವರು ಭಾಗವಹಿಸುವರು.

ಅಕ್ಟೋಬರ್ 24ರಂದು ಅಪರಾಹ್ನ 4.00 ಗಂಟೆಗೆ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ಶ್ರೀಗಳಿಗೆ ಭಕ್ತಿ ಸಮರ್ಪಣೆ ನಡೆಯಲಿದೆ. ಶ್ರೀಮಠದಲ್ಲಿ ಸಂಜೆ 6.30ಕ್ಕೆ ಮಕ್ಕಳ ಸಂಭ್ರಮ ಏರ್ಪಡಿಸಲಾಗಿದ್ದು, ಬಾಲಪ್ರತಿಭೆಗಳು ಭಾಗವಹಿಸಲಿದ್ದಾರೆ.

ಕೊನೆಯ ದಿನ ಅಕ್ಟೋಬರ್ 25 ರಂದು ಬೆಳಗ್ಗೆ 10 ಗಂಟೆಗೆ ಶೂನ್ಯಪೀಠಾರೋಹಣ, 12 ಗಂಟೆಗೆ ಶ್ರೀ ಜಗದ್ಗುರು ಜಯದೇವ ಜಂಗೀಕುಸ್ತಿ, ಸಂಜೆ 6.30ಕ್ಕೆ ಶರಣಸಂಸ್ಕøತಿ ಉತ್ಸವ ಸಮಾರೋಪ ನಡೆಯಲಿದ್ದು, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸಂಸದ ಜಿ.ಎಂ. ಸಿದ್ದೇಶ್ವರ, ಮಾಜಿಸಚಿವ ಹೆಚ್.ಎಂ. ರೇವಣ್ಣ ಮೊದಲಾದವರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಶಿವಬಸವ ಸ್ವಾಮಿಗಳು, ಕಾರ್ಯಾಧ್ಯಕ್ಷ ಕೆ.ಸಿ. ನಾಗರಾಜ್, ಎಸ್.ಜೆ.ಎಂ. ವಿದ್ಯಾಪೀಠದ ಸಿಇಓ ಎಂ. ಭರತ್‍ಕುಮಾರ್, ಉಮೇಶ್ ವಕೀಲರು, ಎಸ್. ಪರಮೇಶ್ವರ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!