ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿಯಲ್ಲಿ ಪರೀಕ್ಷೆಯ ಫಲಿತಾಂಶವನ್ನು ಸುದ್ದಿಗೋಷ್ಟಿ ಮೂಲಕ ಪ್ರಕಟವಾಗಿದೆ. ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಲವು ಅಧಿಕಾರಿಗಳಿಂದ ಫಲಿತಾಂಶದ ಮಾಹಿತಿ ಹೊರಬಿದ್ದಿದೆ. ಈ ಬಾರಿ 6 ಲಕ್ಷದ 98 ಸಾವಿರದ 378 ವಿದ್ಯಾರ್ಥಿಗಳು ಅರ್ಹರಾಗಿದ್ದರು. ಆದರೆ ಈ ಬಾರಿ 6 ಲಕ್ಷದ 81 ಸಾವಿರದ 079 ವಿದ್ಯಾರ್ಥಿಗಳು ಹಾಜರಾಗಿದ್ದರು.

5 ಲಕ್ಷದ 52 ಸಾವಿರದ 690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇಕಡ 81 ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇನ್ನು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಗದಗ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ವಿಜ್ಞಾನ ವಿಭಗಾದಲ್ಲಿ ವಿದ್ಯಾಲಕ್ಷ್ಮೀ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









