ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬಂದಿದ್ದು, ಮಧ್ಯಾಹ್ನವೇ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಫಲಿತಾಂಶ ಕಂಡು ಖುಷಿ ಪಟ್ಟಿದ್ದಾರೆ. ಇದೀಗ ಸಂಜೆ ವೇಳೆ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಟಿ ನಡೆಸಿ, ಪ್ರತಿ ಜಿಲ್ಲೆಯಲ್ಲಿ ಎಷ್ಟೆಷ್ಟು ಶೇಕಡವಾರು ಫಲಿತಾಂಶ ಬಂದಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈ ಬಾರಿಯೂ ಸಹಜವಾಗಿಯೇ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

ಚಿತ್ರದುರ್ಗ ಜಿಲ್ಲೆ ಶೇ 79.12 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 27ನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶೇ 59.87 ಫಲಿತಾಂಶ ದಾಖಲಿಸಿ 28ನೇ ಸ್ಥಾನ ಪಡೆದಿತ್ತು.ಈ ಬಾರಿ ಒಂದು ಸ್ಥಾನ ಮೇಲಕ್ಕೆ ಜಿಗಿದಿದೆ.
ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ













