ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದು ಶಿವಮೊಗ್ಗದಲ್ಲಿ ಭಯದ ಆತಂಕ ನಿರ್ಮಾಣವಾಗಿತ್ತು. ಸದ್ಯಕ್ಕೆ ಪರಿಸ್ಥಿತಿ ಸರಿ ಆಗಿದೆ. ಪೊಲೀಸರು ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಹಲವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸದ್ಯಕ್ಕೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಸರಿ ಇದೆ ಎನ್ನುವಾಗಲೇ ಮತ್ತೆ 144 ಸೆಕ್ಷನ್ ಮುಂದುವರೆದಿದೆ.
ಕಳೆದ ನಾಲ್ಕು ದಿನದಿಂದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಶಿವಮೊಗ್ಗದ ಪೊಲೀಸರು ಕೂಡ ಹೈಅಲರ್ಟ್ ಆಗಿದ್ದಾರೆ. ಯಾವುದೇ ಅನಾಹುತ ನಡೆಯದಂತೆ ಪೊಲೀಸರು ಕಾವಲಿಗಿದ್ದಾರೆ. 144 ಸೆಕ್ಷನ್ ಹಾಕಿದ್ದು, ಕಟ್ಟು ನಿಟ್ಟಿನ ನಿಗಾ ವಹಿಸಿದ್ದಾರೆ.
ಈ ಸಂಬಂಧ ಮಾತಮಾಡಿದ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ರಾಗಿಗುಡ್ಡದಲ್ಲಿ ಶಾಂತಿಯಿದೆ, ಭಯಪಡಬೇಡಿ. ಅಂಗಡಿ-ಮುಂಗಟ್ಟು ತೆರೆದು ವ್ಯಾಪಾರ ಆರಂಭಿಸಿ. ಯಾರೂ ವದಂತಿಗಳಿಗೆ ಕಿವಿಗೊಡಬೇಡಿ. ಅನಾವಶ್ಯಕವಾಗಿ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






