ರಾಜ್ಯಪಾಲ ಥಾವರ್ ಚಂದ್ ಗೆ ಏಕಾಏಕಿ ಭದ್ರತೆ ಹೆಚ್ಚಳ : ಕಾರಣವೇನು..?

 

ಬೆಂಗಳೂರು: ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇದ್ದಕ್ಕಿದ್ದ ಹಾಗೇ ಭದ್ರತೆ ಹೆಚ್ಚಳವಾಗಿದೆ. ರಾಜ್ಯ ಪೊಲೀಸ್ ಇಲಾಖೆ ರಾಜ್ಯಪಾಲರಿಗೆ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಥಾವರ್ ಚಂದ್ ಅವರು ಇಷ್ಟು ದಿನ ಬುಲೆಟ್ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಭದ್ರತೆ ಹೆಚ್ಚಾದಾಗಿನಿಂದ ಬುಲೆಟ್ ಪ್ರೂಫ್ ಕಾರಿನಲ್ಲಿ ಓಡಾಡುತ್ತಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬುಲೆಟ್ ಪ್ರೂಫ್ ಕಾರಿನಲ್ಲಿಯೇ ಬಂದಿದ್ದಾರೆ. ರಾಜ್ಯಪಾಲರಿಗೆ ಇದ್ದಕ್ಕಿದ್ದ ಹಾಗೇ ಭದ್ರತೆ ಹೆಚ್ಚಳ ಮಾಡಿರುವ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಇಲ್ಲ. ಆದರೆ ಎಲ್ಲಾ ಕಡೆಗೂ ಬುಲೆಟ್ ಪ್ರೂಫ್ ಕಾರಿನಲ್ಲಿಯೇ ಓಡಾಟ ನಡೆಸುತ್ತಿದ್ದಾರೆ. ಸದ್ಯ ಎಲ್ಲಾ ರೀತಿಯ ಭದ್ರತೆಯನ್ನು ರಾಜ್ಯಪಾಲರಿಗೆ ಒದಗಿಸಲಾಗಿದೆ.

ಇತ್ತಿಚೆಗೆ ರಾಜ್ಯ ಸರ್ಕಾರ ವರ್ಸಸ್ ರಾಜ್ಯಪಾಲರು ಎಂಬಂತೆ ಆಗಿದೆ. ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ಮೂಡಾ ಹ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಾರೆ. ಹೀಗಾಗಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ರಾಜಭವನ ಬಿಜೆಪಿ ನಾಯಕರ ಕೇಂದ್ರವಾಗಿದೆ ಎಂದೇ ಕಿಡಿಕಾರಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ರಾಜ್ಯಪಾಲರ ನಡೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ಸದ್ಯ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೇನೆ ತಾತ್ಕಾಲಿಕ ಜಯ ಸಿಕ್ಕಿದೆ. ಈ ತಿಂಗಳ ಕೊನೆ ಎಂದರೆ ಆಗಸ್ಟ್ 29ಕ್ಕೆ ಹೈಕೋರ್ಟ್ ನಲ್ಲಿ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ಬಳಿಕ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಯಾವ ರೀತಿಯ ತೀರ್ಮಾನ ಹೊರ ಬೀಳಲಿದೆ ಎಂಬುದನ್ನು ನೋಡಬೇಕಿದೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

55 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago