Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏನು ಇಲ್ಲ ಎಂದವರಿಗೆ ಹನುಮಂತು ಎಂಥಾ ಆಟ ತೋರಿಸಿದ್ರು ನೋಡಿ : 2ನೇ ಸಲ ಕ್ಯಾಪ್ಟನ್.. ಮನೆ ಮಂದಿ ಶಾಕ್..!

---Advertisement---

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಕುರಿಗಾರ್ ಹನುಮಂತು ಬಂದಿರೋದು ನಿಮ್ಗೆಲ್ಲಾ ಗೊತ್ತೆ‌ ಇದೆ. ಪಕ್ಕಾ ಉತ್ತರ ಕರ್ನಾಟದ ಗ್ರಾಮೀಣ ಭಾಗದ ಪ್ರತಿಭೆಯೇ ಸರಿ. ಬಿಗ್ ಬಾಸ್ ಮನೆಯಲ್ಲೂ ಸದಾ ಪಕ್ಕ ಉತ್ತರ ಕರ್ನಾಟಕ ಭಾಷೆಯನ್ನೇ ಮಾತನಾಡುತ್ತಾ, ಎಲ್ಲರನ್ನು ನಕ್ಕಿ ನಲಿಸುತ್ತಾರೆ. ಅದರಲ್ಲೂ ಧನರಾಜ್ ಹಾಗೂ ಹನುಮಂತು ಬೆಸ್ಟ್ ಫ್ರೆಂಡ್ಸ್. ಇಬ್ಬರು ಸೇರಿದ್ರೆ ಒಂದೊಳ್ಳೆ ಕಾಮಿಡಿ ಮಾಡ್ತಾ ಇರ್ತಾರೆ. ಇವರಿಬ್ಬರ ಕಾಂಬಿನೇಷನ್ ಸದ್ಯಕ್ಕೆ ವರ್ಕ್ ಆಗ್ತಾ ಇದೆ.

ಆದರೆ ಹನುಮಂತುನನ್ನು ಮನೆಯಲ್ಲಿ ಎಲ್ಲರೂ ಕಡೆಗಣಿಸುತ್ತಾರೆ. ಹನುಮಂತು ಏನೇನು ಅಲ್ಲ ಎನ್ನುತ್ತಾರೆ. ಬರೀ ಹಾಡೋಳೇದು ಬಿಟ್ರೆ ಏನು ಬರಲ್ಲ ಅನ್ನೋ ತೀರ್ಮಾನಕ್ಕೆ ಬಂದಿದ್ದರು. ಆದರೆ ಆ ಎಲ್ಲಾ ಮಾತುಗಳನ್ನು ಮೀರಿ ಹನುಮಂತು ಇಂದು ಮತ್ತೆ ಕ್ಯಾಪ್ಟನ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಿಗ್ ಬಾಸ್ ಮನೆಯೊಳಗೆ ಬಂದ ಹನುಮಂತುಗೆ ಬಿಗ್ ಬಾಸ್ ಕಡೆಯಿಂದಾನೇ ಕ್ಯಾಪ್ಟನ್ ಆಗುವ ಅವಕಾಶ ಸಿಕ್ಕಿತ್ತು. ಆಗಲೂ ಮನೆ ಮಂದಿ ಬೇಸರ ಮಾಡಿಕೊಂಡಿದ್ದರು. ಇದೀಗ ಟಾಸ್ಕ್ ಗೆಲ್ಲುವ ಮೂಲಕ ಹನುಮಂತು ಕ್ಯಾಪ್ಟನ್ ಆಗಿದ್ದಾರೆ.

ಬಲೆಯೊಳಗೆ ಹೋಗಿ ಬಾಕ್ಸ್ ಎತ್ತಿಕೊಂಡು ಬರುವ ಆಟದಲ್ಲಿ ಹನುಮಂತು ಗೆದ್ದಿದ್ದು, ಎರಡನೇ ಸಲ ಕ್ಯಾಪ್ಟನ್ ಆಗುವಲ್ಲಿ ಯಶಸ್ವಿಯಾಗಿದ್ದಾರೆ. ಸ್ನೇಹಿತ ಕ್ಯಾಪ್ಟನ್ ಆಗಿದ್ದನ್ನು ಕಂಡು ಧನರಾಜ್ ಫುಲ್ ಖುಷಿಯಾಗಿದ್ದಾರೆ. ಅದೇ ಖುಷಿಯಲ್ಲಿ ಹೆಗಲ ಮೇಲೆ ಹೊತ್ತುಕೊಂಡು ಮನೆಯಲ್ಲೆಲ್ಲಾ ಓಡಾಡಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಲ್ಲಿರುವ ಮಂದಿ ಬಗ್ಗೆ ಒಂದಷ್ಟು ಅರ್ಥ ಮಾಡಿಕೊಂಡಿರುವ ಹನುಮಂತು ಯಾವ ರೀತಿ ಕ್ಯಾಪ್ಟನ್ಸಿಯನ್ನು ನಿಭಾಯಿಸುತ್ತಾರೆ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...