Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿರೋಧ ಪಕ್ಷದವರಿಗಿಂತ ಸ್ವಪಕ್ಷದವರಿಂದಾನೇ ಮುಜುಗರ : ಮಾತಾಡದಂತೆ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಸದ್ಯಕ್ಕೆ ಅವರ‌ಮುಂದಿರುವ ಟಾರ್ಗೆಟ್ ಲೋಕಸಭಾ ಚುನಾವಣೆ. ಇದಕ್ಕಾಗಿ ಈಗಾಗಲೇ ಬಾರೀ ತಯಾರಿಯನ್ನು ನಡೆಸುತ್ತಿದೆ. ಇದಕ್ಕೆ ವಿರುದ್ಧವಾಗಿ‌ ಬಿಜೆಪಿ ಕೂಡ ಪಣ ತೊಟ್ಟಿದೆ. ಕಾಂಗ್ರೆಸ್ ಸೋಲಿಸಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಪ್ರತಿಷ್ಠೆ. ಹೀಗಾಗಿ ಆಡಳಿತ ಪಕ್ಷದ ಜುಟ್ಟು ಹಿಡಿಯಲು ಇರುವ ದಾರಿಯನ್ನ ಸ್ವಪಕ್ಷದವರೇ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಡಿಕೆ ಶಿವಕುಮಾರ್ ಎಚ್ಚರಿಕೆಯನ್ನು ರವಾನಿಸಿದ್ದಾರೆ.ಪಲ

ಇತ್ತಿಚೆಗೆ ಸತೀಶ್ ಜಾರಕಿಹೊಳಿ ಪಕ್ಷದ ಬಗ್ಗೆ ಮಾತನಾಡಿದ್ದರು. ಕಾಂಪ್ರೂಮೈಸ್ ಆಗಿದ್ದೇನೆ. ಅದು ನನ್ನ ದೌರ್ಬಲ್ಯ ಅಲ್ಲ ಎಂದು ಡಿಕೆಶಿ ವಿರುದ್ಧ ಹರಿಹಾಯ್ದಿದ್ದರು. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಕೂಡ, ಬೆಳಗಾವಿಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕೆ ಶಾಸಕರು ಹೋಗಬೇಕಿತ್ತು. ಆದರೆ ನನ್ನ ಮೌನ ದೌರ್ಬಲ್ಯ ಅಲ್ಲ ಅಂತ ಹೇಳಿದ್ದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ವಿಪಕ್ಷದವರಿಗಿಂತ ಸ್ವಪಕ್ಷದವರೇ ಮಾತನಾಡುತ್ತಿದ್ದರು.

ಈ ಸಂಬಂಧ ಎಚ್ಚರಿಕೆ ನೀಡಿರುವ ಡಿಕೆ ಶಿವಕುಮಾರ್, ಯಾರೂ ಪಕ್ಷದ ಬಗ್ಗೆ ಮಾತನಾಡಬಾರದು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ಮಾತನಾಡಲು ನಾನು ಮತ್ತು ಸಿದ್ದರಾಮಯ್ಯ ಇದ್ದೇವೆ ಎಂದಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ಹೊಡೆತ ಬೀಳುವುದನ್ನು ತಪ್ಪಿಸಿದ್ದಾರೆ. ಸ್ವಪಕ್ಷದವರೇ ಮಾತನಾಡಿದಾಗ ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯವಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...