ವಿರೋಧ ಪಕ್ಷದವರಿಗಿಂತ ಸ್ವಪಕ್ಷದವರಿಂದಾನೇ ಮುಜುಗರ : ಮಾತಾಡದಂತೆ ಎಚ್ಚರಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

 

ಬೆಂಗಳೂರು: ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ. ಸದ್ಯಕ್ಕೆ ಅವರ‌ಮುಂದಿರುವ ಟಾರ್ಗೆಟ್ ಲೋಕಸಭಾ ಚುನಾವಣೆ. ಇದಕ್ಕಾಗಿ ಈಗಾಗಲೇ ಬಾರೀ ತಯಾರಿಯನ್ನು ನಡೆಸುತ್ತಿದೆ. ಇದಕ್ಕೆ ವಿರುದ್ಧವಾಗಿ‌ ಬಿಜೆಪಿ ಕೂಡ ಪಣ ತೊಟ್ಟಿದೆ. ಕಾಂಗ್ರೆಸ್ ಸೋಲಿಸಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಪ್ರತಿಷ್ಠೆ. ಹೀಗಾಗಿ ಆಡಳಿತ ಪಕ್ಷದ ಜುಟ್ಟು ಹಿಡಿಯಲು ಇರುವ ದಾರಿಯನ್ನ ಸ್ವಪಕ್ಷದವರೇ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಡಿಕೆ ಶಿವಕುಮಾರ್ ಎಚ್ಚರಿಕೆಯನ್ನು ರವಾನಿಸಿದ್ದಾರೆ.ಪಲ

ಇತ್ತಿಚೆಗೆ ಸತೀಶ್ ಜಾರಕಿಹೊಳಿ ಪಕ್ಷದ ಬಗ್ಗೆ ಮಾತನಾಡಿದ್ದರು. ಕಾಂಪ್ರೂಮೈಸ್ ಆಗಿದ್ದೇನೆ. ಅದು ನನ್ನ ದೌರ್ಬಲ್ಯ ಅಲ್ಲ ಎಂದು ಡಿಕೆಶಿ ವಿರುದ್ಧ ಹರಿಹಾಯ್ದಿದ್ದರು. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಕೂಡ, ಬೆಳಗಾವಿಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕೆ ಶಾಸಕರು ಹೋಗಬೇಕಿತ್ತು. ಆದರೆ ನನ್ನ ಮೌನ ದೌರ್ಬಲ್ಯ ಅಲ್ಲ ಅಂತ ಹೇಳಿದ್ದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ವಿಪಕ್ಷದವರಿಗಿಂತ ಸ್ವಪಕ್ಷದವರೇ ಮಾತನಾಡುತ್ತಿದ್ದರು.

ಈ ಸಂಬಂಧ ಎಚ್ಚರಿಕೆ ನೀಡಿರುವ ಡಿಕೆ ಶಿವಕುಮಾರ್, ಯಾರೂ ಪಕ್ಷದ ಬಗ್ಗೆ ಮಾತನಾಡಬಾರದು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ಮಾತನಾಡಲು ನಾನು ಮತ್ತು ಸಿದ್ದರಾಮಯ್ಯ ಇದ್ದೇವೆ ಎಂದಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ಹೊಡೆತ ಬೀಳುವುದನ್ನು ತಪ್ಪಿಸಿದ್ದಾರೆ. ಸ್ವಪಕ್ಷದವರೇ ಮಾತನಾಡಿದಾಗ ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯವಿದೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

17 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

41 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago