ಸುದ್ದಿಒನ್, ಚಿತ್ರದುರ್ಗ, ಜು.12 : ಹಿರಿಯ ರಾಜಕೀಯ ಮುತ್ಸದ್ಧಿ, ಮಾಜಿ ಸಂಸದರು, ಜನಪರ ಹೋರಾಟಗಾರ ಹೆಚ್. ಹನುಮಂತಪ್ಪನವರ ನಿಧನಕ್ಕೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ಹಾಗೂ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಪಿ.ಎಸ್. ಶಂಕರ್ ಮತ್ತು ಎನ್.ಎಸ್. ಚಂದ್ರಶೇಖರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಪರಮಭಕ್ತರಾಗಿ, ಶ್ರೀಮಠದ ಸಾಮಾಜಿಕ, ಧಾರ್ಮಿಕ ಹಾಗು ಶೈಕ್ಷಣಿಕ, ಜನಪರ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸೇವೆ ಸಲ್ಲಿಸಿರುವುದನ್ನು ಸ್ಮರಿಸಿರುವ ಅವರು, ಮೃತರ ಅಗಲಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಹಿತೈಷಿಗಳಿಗೆ ಆಗಿರುವ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲಿ ಎಂದಿದ್ದಾರೆ.




