Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರು ಅಪಘಾತದಲ್ಲಿ ಹಿರಿಯ IAS ಅಧಿಕಾರಿ ಮಹಂತೇಶ್ ಬೀಳಗಿ‌ ಸಾವು..!

---Advertisement---

ಕಲಬುರಗಿ : ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಂತೇಶ್ ಬೀಳಗಿ ಅವರ ಕಾರು ಅಪಘಾಗಕ್ಕೀಡಾಗಿದ್ದು, ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಮಹಂತೇಶ್ ಬೀಳಗಿ ಸೇರಿದಂತೆ ಅವರ ಇಬ್ಬರು ಸಹೋದರರು ಸಾವನ್ನಪ್ಪಿದ್ದಾರೆ. ಶಂಕರ್ ಬೀಳಗಿ, ಈರಣ್ಣ ಶಿರಸಂಗಿ ಹಾಗೂ ಮಹಂತೇಶ್ ಬೀಳಗಿ ನಿಧನರಾಗಿದ್ದಾರೆ.

ಮಹಂತೇಶ್ ಬೀಳಗಿ ಅವರು ಈ ಹಿಂದೆ ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದರು. ಮದುವೆಗೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದರು. ಈ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.

ಮಹಂತೇಶ್ ಬೀಳಗಿ ಹಾಗೂ ಸಹೋದರರು ಪ್ರಯಾಣಿಸುತ್ತಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದೆ. ಇನ್ನೋವಾ ಕಾರಿನಲ್ಲಿದ್ದವರಿಗೂ ಹೆಚ್ಚು ಪೆಟ್ಟಾಗಿದೆ. ಇದರ ಪರಿಣಾಮ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಮಹಂತೇಶ್ ಬೀಳಗಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮದುವೆ ಮನೆಗೆ ಖುಷಿ ಖುಷಿಯಾಗಿ ಹೋಗುತ್ತಿದ್ದವರನ್ನು ವಿಧಿ ಮಸಣದೆಡೆಗೆ ಎಳೆದುಕೊಂಡು ಹೋದದ್ದು ದುರಂತವೇ ಸರಿ. ಹಿರಿಯ ಐಎಎಸ್ ಅಧಿಕಾರಿಯನ್ನು ಕಳೆದುಕೊಂಡ ರಾಜ್ಯದ ಜನತೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಕ್ಕೆ ಈ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಹಂತೇಶ್ ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಬದುಕಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೊನೆಯುಸಿರೆಳೆದಿದ್ದಾರೆ. ದುರಂತ ಸಾವಿಗೆ ಕುಟುಂಬಸ್ಥರು ಕಣ್ಣೀರಾಕುತ್ತಿದ್ದಾರೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now