Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ರಾಜಕಾರಣಿ, ಮಾಜಿ ಉಪಸಭಾಪತಿ ಸಿ. ವೀರಣ್ಣ ವಿಧಿವಶ: ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

---Advertisement---

ತುಮಕೂರು.ಜುಲೈ.25: ರಾಜ್ಯ ರಾಜಕಾರಣದ ಹಿರಿಯ ಮುಖಂಡ, ಮಾಜಿ ಸಚಿವ ಹಾಗೂ ವಿಧಾನಪರಿಷತ್ ಮಾಜಿ ಉಪಸಭಾಪತಿ ಸಿ. ವೀರಣ್ಣ (89) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತಮ್ಮ ಸ್ವಗ್ರಾಮ ಬುಕ್ಕಪಟ್ಟಣದ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿ. ವೀರಣ್ಣ ಅವರು, ದಿ. ರಾಮಕೃಷ್ಣ ಹೆಗಡೆ ಮತ್ತು ದಿ. ಎಸ್.ಆರ್. ಬೊಮ್ಮಾಯಿ ಅವರ ಸಚಿವ ಸಂಪುಟಗಳಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಲ್ಲದೆ ವಿಧಾನಪರಿಷತ್ ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿದೆ.

ಸಕ್ರಿಯ ರಾಜಕೀಯದಿಂದ ನಿವೃತ್ತರಾದ ಬಳಿಕ, ಅವರು ಬುಕ್ಕಪಟ್ಟಣದ ತಮ್ಮ ನಿವಾಸದಲ್ಲೇ ಮಕ್ಕಳ ಜೊತೆ ಸರಳವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದರು. ಅಗಲಿದ ನಾಯಕನ ಅಂತಿಮ ಸಂಸ್ಕಾರವು ಇಂದು ಸಂಜೆ 4 ಗಂಟೆಗೆ ಬುಕ್ಕಪಟ್ಟಣದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ. ಅವರ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗದಲ್ಲಿ ಸಿಎಂ ಡಿಕೆಶಿ ಬರ ಪರಿಶೀಲನೆ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸೂಚನೆ; ಸರ್ಕಾರಿ ಶಾಲೆ ದತ್ತು ಯೋಜನೆ ಬಗ್ಗೆ ಸ್ಪಷ್ಟನೆ!

ಮಾಜಿ ಸಚಿವ, ಉಪಸಭಾಪತಿ ಸಿ.ವೀರಣ್ಣ ನಿಧನ : ಸಿಎಂ ಡಿ.ಕೆ ಶಿವಕುಮಾರ್ ಸಂತಾಪ

ಚಿತ್ರದುರ್ಗ : ರಾಜ್ಯದಲ್ಲಿ ಕುಡಿಯುವ ನೀರು, ಶಿಕ್ಷಣ ಹಾಗೂ ರೈತರ ಸಮಸ್ಯೆ ಬಗ್ಗೆ ಸರ್ಕಾರದ ಕಟ್ಟುನಿಟ್ಟಿನ ಕ್ರಮ : ಸಿಎಂ ಡಿ.ಕೆ ಶಿವಕುಮಾರ್

ಥ್ಯಾಂಕ್ಯೂ ಫ್ರೆಂಡ್ಸ್ : ಪ್ರಧಾನಿ ಮೋದಿಯಿಂದ ಯುವಜನತೆಗೆ ಮತ್ತೊಂದು ಸೆಲ್ಫಿ ವಿಡಿಯೋ ಸಂದೇಶ

ಅತಿಯಾದ ಟಿವಿ ವೀಕ್ಷಣೆ ಮೆದುಳಿನ ಮೇಲೆ ಏನು ಮಾಡುತ್ತದೆ? ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಚಿತ್ರದುರ್ಗದಲ್ಲಿಇಂದು ಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ