ತುಮಕೂರು.ಜುಲೈ.25: ರಾಜ್ಯ ರಾಜಕಾರಣದ ಹಿರಿಯ ಮುಖಂಡ, ಮಾಜಿ ಸಚಿವ ಹಾಗೂ ವಿಧಾನಪರಿಷತ್ ಮಾಜಿ ಉಪಸಭಾಪತಿ ಸಿ. ವೀರಣ್ಣ (89) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತಮ್ಮ ಸ್ವಗ್ರಾಮ ಬುಕ್ಕಪಟ್ಟಣದ ನಿವಾಸದಲ್ಲೇ ಕೊನೆಯುಸಿರೆಳೆದಿದ್ದಾರೆ.
ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿ. ವೀರಣ್ಣ ಅವರು, ದಿ. ರಾಮಕೃಷ್ಣ ಹೆಗಡೆ ಮತ್ತು ದಿ. ಎಸ್.ಆರ್. ಬೊಮ್ಮಾಯಿ ಅವರ ಸಚಿವ ಸಂಪುಟಗಳಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಲ್ಲದೆ ವಿಧಾನಪರಿಷತ್ ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ ಹಿರಿಮೆ ಅವರದ್ದಾಗಿದೆ.

ಸಕ್ರಿಯ ರಾಜಕೀಯದಿಂದ ನಿವೃತ್ತರಾದ ಬಳಿಕ, ಅವರು ಬುಕ್ಕಪಟ್ಟಣದ ತಮ್ಮ ನಿವಾಸದಲ್ಲೇ ಮಕ್ಕಳ ಜೊತೆ ಸರಳವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಶ್ರಾಂತ ಜೀವನ ನಡೆಸುತ್ತಿದ್ದರು. ಅಗಲಿದ ನಾಯಕನ ಅಂತಿಮ ಸಂಸ್ಕಾರವು ಇಂದು ಸಂಜೆ 4 ಗಂಟೆಗೆ ಬುಕ್ಕಪಟ್ಟಣದಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನೆರವೇರಲಿದೆ. ಅವರ ನಿಧನಕ್ಕೆ ಜಿಲ್ಲೆಯ ಅನೇಕ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









