Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಹನ ಸವಾರರೆ ಸೆಪ್ಟೆಂಬರ್ 15 ಲಾಸ್ಟ್ ಡೇಟ್ : HSRP ಅಳವಡಿಸಿಕೊಳ್ಳದಿದ್ರೆ ದಂಡ ಗ್ಯಾರಂಟಿ..!

---Advertisement---

 

ಬೆಂಗಳೂರು: ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಒಂದು ಸಿಕ್ಕಿದೆ. ತಮ್ಮ ಗಾಡಿಗಳಿಗೆ HSRP ಪ್ಲೇಟ್ ಅಳವಡಿಕೆಗೆ ಇನ್ನಷ್ಟು ಸಮಯ ಸಿಗಬಹುದೇನೋ ಅಂತ ಕಾಯುತ್ತಾ ಇದ್ರು. ಆದ್ರೆ ಈಗ ಅದಕ್ಕೆ ಎಕ್ಸ್ ಕ್ಯೂಸ್ ಸಿಗುವ ಸಾಧ್ಯತೆ ಕಡಿಮೆಯಾಗಿದೆ. ರಿಲೀಫ್ ಕೊಡುವ ಲೆಕ್ಕಚಾರದಲ್ಲಿ ಸಾರಿಗೆ ಇಲಾಖೆ ಇಲ್ಲ. ಡೆಡ್ ಲೈನ್ ನೀಡಿದ್ದು, ಸೆಪ್ಟೆಂಬರ್ 15ರ ಒಳಗೆ ಅಳವಡಿಕೆ ಮಾಡಿಕೊಳ್ಳದೆ ಹೋದರೆ ಭಾರೀ ಪ್ರಮಾಣದ ದಂಡ ಕಟ್ಟಬೇಕಾಗುತ್ತದೆ. ಹೆಚ್ಎಸ್ಆರ್ಪಿ ನಂಬರ್ ಅಳವಡಿಸಿಕೊಳ್ಳದೆ ಇರುವವರಿಗೆ ಸಾರಿಗೆ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಸೆಪ್ಟೆಂಬರ್ 15ರ ನಂತರ ಪರೀಕ್ಷೆ ಮಾಡಲಾಗುತ್ತದೆ. ಒಂದು ವೇಳೆ ನಿಮ್ಮ ಗಾಡಿಗಳಲ್ಲಿ ಹೆಚ್ಎಸ್ಆರ್ಪಿ ಪ್ಲೇಟ್ ಗಳು ಇಲ್ಲದೆ ಇದ್ದರೆ ದಂಡ ಬೀಳೋದು ಗ್ಯಾರಂಟಿಯಾಗಿದೆ. ನಿಮ್ಮ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಕೆಗೆ ಇನ್ನು ಐದು ಅಷ್ಟೇ ಕಾಲಾವಕಾಶವಿದೆ. ಅಷ್ಟರೊಳಗೆ ಹೆಚ್ಎಸ್ಆರ್ಪಿ ಪ್ಲೇಟ್ ಅನ್ನು ನಿಮ್ಮ ಗಾಡಿಗಳಿಗೆ ಹಾಕಿಸಿಕೊಳ್ಳಿ. ಇಲ್ಲವಾದರೆ ದಂಡ ಕಟ್ಟುವುದಕ್ಕೆ ರೆಡಿಯಾಗಿರಿ.

2019 ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಗಾಡಿಗಳಿಗೆ ಈ ನಿಯಮ ಅನ್ವಯಿಸುತ್ತದೆ. ಆ ಗಾಡಿ ಮಾಲೀಕರು ಪ್ಲೇಟ್ ಅನ್ನು ಹಾಕಿಸಲೇಬೇಕಾಗಿದೆ. ಇಲ್ಲಿಯವರೆಗೂ ಕೇವಲ 50 ಲಕ್ಷ ವಾಹನ ಸವಾರರು ಮಾತ್ರ ಹೆಚ್ಎಸ್ಆರ್ಪಿ ಪ್ಲೇಟ್ ಅನ್ನು ಅಳವಡಿಕೆ ಮಾಡಿದ್ದಾರೆ. ಇನ್ನೂ 1.4 ಕೋಟಿ ವಾಹನ ಸವಾರರು ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಹಾಕಿಸಿಕೊಳ್ಳಬೇಕಿದೆ. ಈಗಾಗಲೇ ಪ್ಲೇಟ್ ಅಳವಡಿಕೆಗೆ ಗಡುವು ನೀಡಲಾಗಿತ್ತು. ಆದರೆ ಇನ್ಮುಂದೆ ಅವಧಿ ವಿಸ್ತರಣೆ‌ ಮಾಡಲ್ಲ ಎಂಬುದನ್ನು ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ಇನ್ನೈದು ದಿನದಲ್ಲಿ ಹಾಕಿಸಿಕೊಳ್ಳಬೇಕಾದ ಟೆನ್ಶನ್ ವಾಹನ ಸವಾರರದ್ದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment