Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2ನೇ ದಿನವೂ ಸರ್ವರ್ ಡೌನ್ : ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಸಲು ಹರಸಾಹಸ…!

---Advertisement---

 

 

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲಗಲಿ ಒಂದಾದಂತ ಗೃಹಜ್ಯೋತಿ ಯೋಜನೆಗೆ ಭಾನುವಾರದಿಂದ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿ ಸುಮಾರು 2.14 ಕೋಟಿ ಜನರಿದ್ದಾರೆ. ಆದರೆ ನಿನ್ನೆಯಿಂದ ಆರಂಭವಾದ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಎದುರಾಗಿದೆ.

ನಿನ್ನೆಯಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್, ಮೆಸ್ಕಾಂ, ಬೆಸ್ಕಾಂ ಸೇರಿದಂತೆ ತಮ್ಮ ಮೊಬೈಲ್ ಗಳಲ್ಲೂ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದರ ನಡುವೆ ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯವಾಗಿಲ್ಲ. ಎರಡನೇ ದಿನವೂ ಈ ತಾಪತ್ರಯ ಮುಂದುವರೆದಿದೆ.

ಇಂದು ಎರಡನೇ ದಿನ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಆದರೆ ಇಂದು ಕೂಡ ಸರ್ವರ್ ಸಮಸ್ಯೆ ಸರಿಯಾಗಿಲ್ಲ. ನಿನ್ನೆ ಒಂದೇ ದಿನ 55 ಸಾವಿರ ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ಸಾಲುಗಟ್ಟಿ ನಿಂತ ಸಾಕಷ್ಟು ಜನ ಕೊನೆ ಗಳಿಗೆಯಲ್ಲಿ ಬೇಸರ ಮಾಡಿಕೊಂಡು ಹೋಗುತ್ತಿದ್ದಾರೆ. ಇಂದು ಕೊಂಚ ಸುಧಾರಣೆಯಾದರೂ ಅರ್ಜಿ ತೆರೆದು ಅಕೌಂಟ್ ನಂಬರ್ ಹಾಕಿದ ಕೂಡಲೇ ಸರ್ವರ್ ಡೌನ್ ಆಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...