Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾಜಿಕ ಬಹಿಷ್ಕಾರ ಪ್ರಕರಣ ಇತ್ಯರ್ಥ : ವಿಶೇಷ ಚೇತನ ದಂಪತಿಗಳನ್ನು ಬರಮಾಡಿಕೊಂಡ ಎನ್. ದೇವರಹಳ್ಳಿ ಗ್ರಾಮಸ್ಥರು

Facebook
Twitter
Telegram
WhatsApp

ಚಿತ್ರದುರ್ಗ ಸೆ. 30 :  ಚಳ್ಳಕೆರೆ ತಾಲ್ಲೂಕು ಎನ್. ದೇವರಹಳ್ಳಿ ಗ್ರಾಮದಲ್ಲಿ ವಿಶೇಷ ಚೇತನ ದಂಪತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಪ್ರಕರಣವನ್ನು ದಂಪತಿಗಳಿಗೆ ಗ್ರಾಮದಲ್ಲಿ ಗ್ರಾಮಸ್ಥರು ಬರಮಾಡಿಕೊಳ್ಳುವ ಮೂಲಕ ಶಾಂತಿಯುತವಾಗಿ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.

ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ನಮ್ಮ ಸಮಾಜದಲ್ಲಿ ಮನೆಮಾಡಿರುವ ಸಾಮಾಜಿಕ ಪಿಡುಗಾಗಿದ್ದು, ಮುಂದುವರೆದಂತಹ ಈ ತಂತ್ರಜ್ಞಾನದ ಯುಗದಲ್ಲಿಯೂ ಇಂತಹ ಅನಿಷ್ಟ ಕಟ್ಟುಪಾಡಿನ ಆಚರಣೆಗಳು ನಾಗರಿಕರನ್ನು ತಲೆತಗ್ಗಿಸುವಂತೆ ಮಾಡುತ್ತದೆ.  ವಿಶೇಷ ಚೇತನ ದಂಪತಿಗಳಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾದ ಬಳಿಕ, ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ಶುಕ್ರವಾರದಂದು ಪೊಲೀಸ್, ಶಿಕ್ಷಣ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿನ ಗ್ರಾಮ ಪಂಚಾಯತ್ ಸದಸ್ಯರು, ಸಮಾಜದ ಮುಖಂಡರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಸಭೆ ಕೈಗೊಂಡು, ಚರ್ಚಿಸಿ, ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ಜರುಗಬಾರದು, ಇಂತಹ ಪ್ರಕರಣವನ್ನು ಬೆಂಬಲಿಸಿದವರು ಕೂಡ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದರು ಎಂದರು.

ಶನಿವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸುಬ್ರ ನಾಯಕ್, ತಹಸಿಲ್ದಾರ್ ರೆಹಾನ್ ಪಾಶಾ, ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಇಲ್ಲಿ ಸಾರ್ವಜನಿಕರು ಹಾಗೂ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿ, ಬಳಿಕ ಇಂತಹ ಪ್ರಕರಣಗಳು ಮರುಕಳಿಸದಂತೆ ಗ್ರಾಮಸ್ಥರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಯಾವುದೇ ಸಮಾಜ ಅಥವಾ ವ್ಯಕ್ತಿಗಳಿಗೆ ದಂಡ ಹಾಕುವ ಅಧಿಕಾರ ಯಾರಿಗೂ ಇಲ್ಲ, ಇಂತಹ ಅಧಿಕಾರ ಕೇವಲ ನ್ಯಾಯಾಲಯಕ್ಕೆ ಮಾತ್ರ ಇದೆ.  ಬಹಿಷ್ಕಾರ ಹಾಕುವಂತಹದು ಕಾನೂನಿಗೆ ವಿರುದ್ಧವಾಗಿದ್ದು, ಇದಕ್ಕೆ ಅವಕಾಶ ನೀಡುವವರು, ಬೆಂಬಲಿಸುವವರು ಎಲ್ಲರೂ ಕಠಿಣ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು.  ಗ್ರಾಮದಲ್ಲಿ ಎಲ್ಲ ಜಾತಿ, ಜನಾಂಗದವರು ಇದ್ದಾರೆ, ಎಲ್ಲರೂ ಸೌಹಾರ್ದಯುತವಾಗಿ ಬಾಳುವುದು ನಮ್ಮ ಆದ್ಯತೆಯಾಗಬೇಕು.  ಮೂಢನಂಬಿಕೆಗಳನ್ನು ತೊಡೆದುಹಾಕಿ, ಅನಿಷ್ಟ ಕಟ್ಟುಪಾಡುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟರು.

ವಿಶೇಷ ಚೇತನ ದಂಪತಿಗಳನ್ನು ಅಧಿಕಾರಿಗಳು ಶನಿವಾರದಂದು ಗ್ರಾಮಕ್ಕೆ ಕರೆತಂದ ಬಳಿಕ, ಗ್ರಾಮಸ್ಥರು ಕೂಡ ದಂಪತಿಗಳನ್ನು ಬರಮಾಡಿಕೊಂಡರು,

ಒಟ್ಟಾರೆಯಾಗಿ ಈ ಪ್ರಕರಣವನ್ನು ದಂಪತಿಗಳು ಗ್ರಾಮದಲ್ಲಿನ ತಮ್ಮ ಮನೆ ಸೇರುವ ಮೂಲಕ ಜಿಲ್ಲಾಡಳಿತದ ವತಿಯಿಂದ ಶಾಂತಿಯುತವಾಗಿ ಇತ್ಯರ್ಥಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಾಮಾಜಿಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಎನ್. ದೇವರಹಳ್ಳಿ ಗ್ರಾಮದಲ್ಲಿಯೂ ಕೂಡ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!