ಶಾರೂಖ್ ಖಾನ್ ಕುಟುಂಬದಲ್ಲಿ ಈದ್ ಹಬ್ಬ ಹೇಗಿತ್ತು..?

ಹೊಸದಿಲ್ಲಿ: ಇಂದು ದೇಶದೆಲ್ಲೆಡೆ ಈದ್ ಹಬ್ಬ ಆಚರಣೆ ಮಾಡಲಾಗಿದೆ. ಈ ಹಿನ್ನೆಲೆ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಮತ್ತು ಅವರ ಪುತ್ರ ಅಬ್ರಾಮ್ ಖಾನ್ ಗೆ ಶುಭ ಹಾರೈಸಲು ಅಭಿಮಾನಿಗಳು ಮುಂಬೈನ ನಿವಾಸ ಮನ್ನತ್‌ನ ಮುಂದೆ ಜಮಾಯಿಸಿದ್ದರು. ಶಾರೂಕ್ ಮತ್ತು ಅವರ ಪುತ್ರ ಹೊರಗೆ ಜಮಾಯಿಸಿದ ಅಭಿಮಾನಿಗಳಿಗೆ ಶುಭಾಶಯ ಕೋರಿದರು.

ಶಾರುಖ್ ಮತ್ತು ಅಬ್ರಾಮ್ ಮನ್ನತ್‌ನ ಕಬ್ಬಿಣದ ಬಾಲ್ಕನಿಯಲ್ಲಿ ಅಭಿಮಾನಿಗಳತ್ತ ಕೈ ಬೀಸಿದ್ದಯ ಕಂಡು ಬಂದಿದೆ. SRK ಬಿಳಿ ಟೀ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿದ್ದರೆ, ಅಬ್ರಾಮ್ ಕೆಂಪು ಟೀ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದರು. ಶಾರುಖ್ ಮತ್ತು ಅಬ್ರಾಮ್ ಇಬ್ಬರೂ ಮನ್ನತ್ ಹೊರಗೆ ನಿಂತಿದ್ದ ಅಭಿಮಾನಿಗಳತ್ತ ಕೈ ಬೀಸಿ ಶುಭಾಶಯ ಕೋರಿದರು. ಜೊತೆಗೆ ಅಭಿಮಾನಿಗಳಿಗತ್ತ ಮುತ್ತನ್ನು ನೀಡಿದ್ದಾರೆ.

ಈ ಫೋಟೋಗಳನ್ನು ಗಮನಿಸಿದ ಅಭಿಮಾನಿಗಳು ಕಾಮೆಂಟ್ ವಿಭಾಗದಲ್ಲಿ ಇನ್ನು ಕೆಲವು ಪೋಸ್ಟ್‌ಗಳನ್ನು ಹಾಕಿದ್ದಾರೆ. ಬಹುದಿನಗಳ ನಂತರ ಕಿಂಗ್ ಖಾನ್ ಬೆಳ್ಳಿತೆರೆಗೆ ಮರಳಲು ಕಾತರದಿಂದ ಕಾಯುತ್ತಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಝೀರೋ ಸಿನಿಮಾದಲ್ಲಿ ಶಾರೂಖ್ ಖಾನ್ ಗೆ ಹೇಳಿಕೊಳ್ಳುವಂತ ಯಶಸ್ಸು ಸಿಗಲೇ ಇಲ್ಲ. ಇದೀಗ ಮುಂಬರುವ ಪಠಾಣ್ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅಟ್ಲಿ ಕುಮಾರ್ ನಿರ್ದೇಶನದ ‘ಜವಾನ್’ ಚಿತ್ರದಲ್ಲಿ ನಯನತಾರಾ ಜೊತೆ ಕಾಣಿಸಿಕೊಳ್ಳಲಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿರುವ ವೈಆರ್‌ಎಫ್‌ನ ‘ಪಠಾನ್’ ಮತ್ತು ತಾಪ್ಸಿ ಪನ್ನು ಜೊತೆ ರಾಜ್‌ಕುಮಾರ್ ಹಿರಾನಿ ಅವರ ವಲಸೆ ನಾಟಕ ‘ಡುಂಕಿ’ ಯಲ್ಲಿ ಶಾರುಖ್ ಕಾಣಿಸಿಕೊಳ್ಳಲಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago