ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ ಪಡೆದ ಶಮಾ ಭಾಗ್ವತ್

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 06 : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ಐಸಿಎಸ್‍ಸಿ ವಿಭಾಗದ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಬಾಲ ಪ್ರತಿಭೆ, ಪ್ರತಿಭಾವಂತ ಭರತನಾಟ್ಯ ಕಲಾವಿದೆ ಶಮಾ ಭಾಗ್ವತ್ ಅವರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಕೊಡಮಾಡುವ “ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ’ ನೀಡುವ ಈ ಪ್ರಶಸ್ತಿಯನ್ನು ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾದೀಶೆ ಎ.ಎಂ.ಚೈತ್ರಾ ರವರು ಪ್ರಶಸ್ತಿಪತ್ರ., ನೆನಪಿನ ಕಾಣಿಕೆ ಹಾಗೂ ನಗದು ಬಹುಮಾನ ಪ್ರಧಾನ ಮಾಡಿ ಗೌರವಿಸಿದರು.

ಈ ಪ್ರಶಸ್ತಿಯನ್ನು ಗಳಿಸುವ ಮೂಲಕ ಶಮಾ ಭಾಗ್ವತ್ ಅವರು ಜಿಲ್ಲೆಗೆ, ಹಾಗೂ ವ್ಯಾಸಂಗ ಮಾಡುತ್ತಿರುವ ಶಾಲೆಗೆ ಕೀರ್ತಿ ತಂದಿರುತ್ತಾರೆ. ಇವರಿಗೆ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕರಾದ, ಶ್ರೀ.ಎಸ್.ಎಂ ಪೃಥ್ವೀಶ ಹಾಗೂ ನಿರ್ದೇಶಕರಾದ ಶ್ರೀಮತಿ ಸುನಿತಾ.ಪಿ.ಸಿ, ಐಸಿಎಸ್‍ಇ ಪ್ರಾಚಾರ್ಯರಾದ ಬಸವರಾಜಯ್ಯ.ಪಿ, ಮುಖ್ಯ ಶಿಕ್ಷಕರಾದ ತಿಪ್ಪೇಸ್ವಾಮಿ.ಎನ್.ಜಿ, ಐಸಿಎಸ್‍ಇ ಉಪಪ್ರಾಚಾರ್ಯರಾದ ಅವಿನಾಶ್ ಬಿ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಶ್ಲಾಘಿಸಿ ಅಭಿನಂದಿಸಿ, ಅವರ ಮುಂದಿನ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದ್ದಾರೆ.

suddionenews

Recent Posts

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

44 minutes ago

ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮ ಕಾರ್ಯ ನಿರ್ವಹಣೆ : ಬಿಸಿ ಸಂಜೀವ ಮೂರ್ತಿ ಮೆಚ್ಚುಗೆ

ಹಿರಿಯೂರು : ಜಿಲ್ಲೆಯಲ್ಲಿಯೇ ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಶಿಮುಲ್ ನಿರ್ದೇಶಕ ಬಿಸಿ…

2 hours ago

ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಜೈ ಭೀಮ್ ಎನ್ನುತ್ತಿದೆ : ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ

  ಸುದ್ದಿಒನ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ…

2 hours ago

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಶ್ರಮಿಕ್ ಸಮ್ಮಾನ್ ಯಾತ್ರೆ : ಫೆ.25 ರಂದು ನವದೆಹಲಿಯಲ್ಲಿ ಬೃಹತ್ ಸಮಾವೇಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಫೆಬ್ರವರಿ 08 ರಂದು ಶ್ರೀ ಜೋಳ ಸಿದ್ದಿವಿನಾಯಕ ದೇವಾಲಯ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 06 :…

3 hours ago

ಟಿಬಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಕಾವ್ಯ

ಚಿತ್ರದುರ್ಗ. ಫೆ.06: ಎಲ್ಲರೂ ಕೈಜೋಡಿಸಿ ಟಿಬಿ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ…

3 hours ago