Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೋತ ಮೇಲೆ ಸುಮ್ಮನೆ ಕೂತಿರಬೇಕು : ಜಿಎಂ ಸಿದ್ದೇಶ್ವರ ವಿರುದ್ಧ ಶಾಮನೂರು ಶಿವಶಂಕರಪ್ಪ ವಾಗ್ದಾಳಿ

---Advertisement---

 

ಸುದ್ದಿಒನ್, ದಾವಣಗೆರೆ, ಜುಲೈ. 31 : ಎಂಪಿ ಎಲೆಕ್ಷನ್ ನಲ್ಲಿ ಸೋತ‌ ಮೇಲೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬೇಕು. ಅದನ್ನು ಬಿಟ್ಟು ಅವರು ಹೇಗೆ ಗೆದ್ದರು, ಇವರು ಹೇಗೆ ಗೆದ್ದರು ಎಂಬುದನ್ನು ಕೆದಕುತ್ತಾ ಕೂರಬಾರದು ಎಂದು ಮಾಜಿ ಸಂಸದ ಜಿಎಂ ಸಿದ್ದೇಶ್ವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಚುನಾವಣೆಯಲ್ಲಿ ಇಂದು ಒಂದು ವೋಟಿನಿಂದ ಗೆದ್ದರಿ, ಸಾವಿರ ವೋಟಿನಿಂದ ಗೆದ್ದರು, ಲಕ್ಷ ವೋಟಿನಿಂದ ಗೆದ್ದರು ಒಂದೇನೆ. ಅದನ್ನು ಬಿಟ್ಟು..? ಅವರು ಹೇಗೆ ಗೆದ್ದರು ಇವರು ಹೇಗೆ ಗೆದ್ದರು ಎಂದು ಕೇಳುತ್ತಾ ಕೂರುವುದಲ್ಲ.

ಯಡಿಯೂರಪ್ಪ, ವಿಜಯೇಂದ್ರ ಅವರಿಗೆ ಬೈದಿಲ್ಲ ಅಂತಾರೆ. ಪೇಪರ್ ಕಟ್ಟಿಂಗ್ ಎಲ್ಲಾ ಕೊಡ್ರಿ ಅವ್ನಿಗೆ. ನಾನು ಕೊಡ್ತೇನೆ. ಅಲ್ಲೊಂದು ಮಾತಾಡ್ತಾನೆ, ಇಲ್ಲೊಂದು‌ ಮಾತಾಡ್ತಾನೆ. ಎಲೆಕ್ಷನ್ ಗೂ ಮುನ್ನ ಹೋಗಿ ನಮ್ ಹತ್ರ ದುಡ್ಡಿಲ್ಲ ಅಂತ ಹೇಳಿ ಐದು ಕೋಟಿ ಹತ್ತು ಕೋಟಿ ತೆಗೆದುಕೊಂಡು ಬಂದಿರೋದು ನಮಗೆಲ್ಲ ಗೊತ್ತಿದೆ. ಅದನ್ನೆಲ್ಲ ಬಿಟ್ಟು ಕೇಸ್ ಹಾಕಿಸಿದ್ದಾನಲ್ಲ ದೊಡ್ಡ ಮನುಷ್ಯ. ಆ ಕೇಸ್ ಅವರಂತೆ ಆಗಿದ್ಯಲ್ಲ. ಏನು ಆಗುತ್ತೆ ಅಂದ್ರೆ ಇನ್ನೊಂದು ಸಲ ಬಂದ್ರೆ ಜಾಸ್ತಿ ಜನ ಅವನ ವಿರುದ್ಧ ಆಗ್ತಾರೆ.

ಈಗಾಗಲೇ ದಾವಣಗೆರೆ ಸುತ್ತಮುತ್ತ ಬಿಜೆಪಿಯನ್ನ ಎರಡು ಮಾಡಿಟ್ಟಿದ್ದಾನೆ. ಇನ್ಮೇಲೆ ನಾಲ್ಕು ಮಾಡಿಡುತ್ತಾನೆ ಅವ್ನು ಅಂತ ಚೆನ್ನಾಗ್ ಅವ್ನೆ‌. ಅವ್ನು ಎಲ್ಲಿ ಕೈ ಇಡುತ್ತಾನೋ ಅಲ್ಲಿ ಹೋಗುತ್ತಾನೆ. ಜನರಿಗೆ ಅದೆಲ್ಲ ಗೊತ್ತಾಗುತ್ತೆ. ಎಂಪಿ ಜನರಿಗೆ ಮುಖ ತೋರಿಸುತ್ತಾನೋ ಗೊತ್ತಿಲ್ಲ. ಅವ ಮೂರು ದಿನ ದಾವಣಗೆರೆಯಲ್ಲಿ ಇರ್ತಾನಂತೆ. ಮೂರು ಅಲ್ಲದೆ ಇದ್ರೆ ನಾಲ್ಕು ದಿನ ಇರ್ಲಿ. ಆದ್ರೆ ಬಾಯಿ‌ ಮುಚ್ಚಿಕೊಂಡು ಇರಬೇಕು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment