Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಚಿಕೆ ಆಗ್ಬೇಕು.. ನಾಚಿಕೆ ಆಗ್ಬೇಕು.. ಸದನದಲ್ಲಿ ಕುಮಾರಸ್ವಾಮಿ ಮತ್ತು ಚೆಲುವರಾಯಸ್ವಾಮಿ ನಡುವೆ ಮಾತಿನ ಯುದ್ದ…!

---Advertisement---

 

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ನಡೆದ ಸದನದಲ್ಲಿ ನಾಗಮಂಗಲದ ಕೆಎಸ್ಆರ್ಟಿಸಿ ಚಾಲಕನ ಆತ್ಮಹತ್ಯೆ ಪ್ರಕರಣ ಸದ್ದು ಮಾಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಈ ವಿಚಾರ ವಾಗ್ಯುದ್ದಕ್ಕೆ ಕಾರಣವಾಗಿತ್ತು. ಸದನದಲ್ಲಿಯೇ ಏಕವಚನದಲ್ಲಿಯೇ ಯುದ್ಧಕ್ಕೆ ನಿಂತು ಬಿಟ್ಟರು. ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಮಧ್ಯೆ ಈ ರೀತಿಯಾಗಿದೆ.

ನಾನು ವರ್ಗಾವಣೆಯ ಬಗ್ಗೆ ಯಾರಿಗೂ ಕರೆ ಮಾಡಿಲ್ಲ, ಯಾವ ಪತ್ರನೂ ಕೊಟ್ಟಿಲ್ಲ. ಚಾಲಕನ ಕುಟುಂಬದವರೇ ವರ್ಗಾವಣೆ ರದ್ದು ಮಾಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯವರಿಗೆ ಕರೆ ಮಾಡಿ ವಿಚಾರಿಸಿದ್ದೆ. ಅನಿವಾರ್ಯ ಇದ್ದರೆ ವರ್ಗಾವಣೆ ಮಾಡಿ, ಇಲ್ಲಾಂದ್ರೆ ಬೇಡ ಎಂದಿದ್ದೆ. ಈ ಹಿನ್ನೆಲೆಯಲ್ಲಿ ಹೋಲ್ಡ್ ಮಾಡಿದ್ದಾರೆ. ವರ್ಗಾವಣೆ ಆದ ಮೂರು ದಿನಗಳ ಬಳಿಕ KSRTC ಡ್ರೈವರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕುಮಾರಸ್ವಾಮಿ ಅವರ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದ ವಿಚಾರ ಎಂದು ಚೆಲುವರಾಯಸ್ವಾಮಿ ಹೇಳಿದ್ದಾರೆ.

ಚಲುವರಾಯಸ್ವಾಮಿ ಮಾತಿಗೆ ಉತ್ತರಿಸಿದ ಹೆಚ್‌ಡಿಕೆ ಇವರು ಎಲ್ಲಾ ಹಳೇ ಚರಿತ್ರೆ ತೆಗೆದಿದ್ದಾರೆ. ಸಿದ್ದರಾಮಯ್ಯನವರ ತೆಗೆಯುವ ಬಗ್ಗೆ ಎಲ್ಲಾ ಹೇಳಿದ್ದಾರೆ. ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡೋಕೆ ನಾವೆಲ್ಲ ಏನೇನು ಮಾಡಬೇಕಿತ್ತು. ಎಲ್ಲವನ್ನೂ ಚರ್ಚೆ ಮಾಡೋಣ. ದೇವೇಗೌಡರು ಸರ್ಕಾರ ವಿಸರ್ಜನೆ ಮಾಡಿದಾಗ ಇವ್ರು ನನ್ನ ಕಾಲು ಕಟ್ಟಿಕೊಳ್ಳೋಕೆ ಬಂದಿದ್ರು. ಇವರ ನನ್ನ ಬಗ್ಗೆ ಮಾತನಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಇಬ್ಬರು ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಚೆಲುವರಾಯಸ್ವಾಮಿ ಅವರು, ಸಿಡಿ ಇದೆ ಅದಿದೆ ಅನ್ನೋದನ್ನ ಬಿಡಿ. ಅನಾವಶ್ಯಕವಾಗಿ ತೇಜೋವಧೆ ಮಾಡೋದನ್ನ ಬಿಡಿ. ನಿಮಗೆ ನಾಚಿಕೆಯಾಗಬೇಕು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರು ನಿನ್ಗೆ ನಾಚ್ಕೆ ಆಗ್ಬೇಕು ಕೂತ್ಕೊ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...