Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾನಗರಕ್ಕೆ ಹರಿದ ಶಾಂತಿಸಾಗರ ನೀರು : ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ನಗರದ ವಿದ್ಯಾನಗರ ಬಡಾವಣೆಗೆ ಜುಲೈ 29 ರಿಂದ ಶಾಂತಿಸಾಗರ ನೀರು ಸರಬರಾಜು ಆದ ಹಿನ್ನೆಲೆಯಲ್ಲಿ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ ಹಾಗೂ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ವಿದ್ಯಾನಗರ ಬಡಾವಣೆ ನಿರ್ಮಾಣವಾಗಿ ಇಷ್ಟು ವರ್ಷಗಳಾದರೂ ನಗರಕ್ಕೆ ಶಾಂತಿಸಾಗರ ನೀರಿಲ್ಲದೆ ಇಲ್ಲಿನ ನಿವಾಸಿಗಳಯ ಕೊಳವೆಬಾವಿ ನೀರನ್ನೇ ಅವಲಂಬಿಸಿದ್ದರು. ಈ ನೀರಿನಲ್ಲಿ ನೈಟ್ರೇಟ್, ಸಲ್ಪೇಟ್ ಮತ್ತು ವಿಷಪೂರಿತ ರಾಸಾಯಿನಿಕಗಳಿಂದ ಕಲುಷಿತವಾಗಿತ್ತು. ಅಷ್ಟೇ ಅಲ್ಲದೇ ಬಡಾವಣೆಯ ಉತ್ತರ ದಿಕ್ಕಿಗೆ ಮಲ್ಲಾಪುರ ಕೆರೆ ಪಕ್ಕದಲ್ಲಿರುವುದರಿಂದ ಈ ಕೆರೆಗೆ ಚಿತ್ರದುರ್ಗ ನಗರದ ಚರಂಡಿಯ ಮೂಲಕ ಕಲುಷಿತ ನೀರು, ಯು.ಜಿ.ಡಿ. ಗಲೀಜು ಕೂಡ ಕೆರೆಗೆ ಸೇರುತ್ತದೆ. ಇದರಿಂದ ಮಲ್ಲಾಪುರ ಕೆರೆಯ ನೀರು ಸಂಪೂರ್ಣ ಮಲೀನಗೊಂಡಿರುವುದರಿಂದ ಈ ನೀರನ್ನು ಬಳಸಲು ಹಾಗೂ ಕುಡಿಯಲು ಯೋಗ್ಯವಾಗಿರುವುದಿಲ್ಲ ಎಂದು ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಬಡಾವಣೆಗೆ ಶಾಂತಿಸಾಗರ ನೀರು ಸರಬರಾಜು ಮಾಡುವಂತೆ ಕಳೆದ ಜುಲೈ 25 ರಂದು ಜಿಲ್ಲಾಧಿಕಾರಿಗೆ, ಜಿಲ್ಲಾ ಪಂಚಾಯತಿ ಸಿಇಒ ಮತ್ತು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.

ಈ ಮನವಿಗೆ ತೀವ್ರವಾಗಿ ಸ್ಪಂದಿಸಿದ ಜಿಲ್ಲಾಡಳಿತ ಕೂಡಲೇ ನೀರು ಸರಬರಾಜು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ (ಜುಲೈ. 29 ರಿಂದ) ವಿದ್ಯಾ ನಗರಕ್ಕೆ ನೀರು ಸರಬರಾಜು ಆಗಿದೆ. ಆದ್ದರಿಂದ ಇಲ್ಲಿನ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತಕ್ಕೆ ಹಾಗೂ ಮೆದೆಹಳ್ಳಿ ಗ್ರಾಮ ಪಂಚಾಯತಿಯವರಿಗೂ ಮತ್ತು
ಸಹಕರಿಸಿದ ಎಲ್ಲರಿಗೂ ವಿದ್ಯಾನಗರದ ನಿವಾಸಿಗಳು ಪರವಾಗಿ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.), ಚಿತ್ರದುರ್ಗ ಸಂಘದಿಂದ  ಶಾಸಕ ವೀರೇಂದ್ರ ಪಪ್ಪಿ ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment