Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶರಣ ಸಂಸ್ಕೃತಿ ಉತ್ಸವ | ಚಿತ್ರದುರ್ಗದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ – ಶ್ರೀ ಜಯದೇವ ಕಪ್- 2024 : ಶ್ರೀರಾಮ್

---Advertisement---

ಸುದ್ದಿಒನ್, ಚಿತ್ರದುರ್ಗ,ಆ. 25 : ಶರಣ ಸಂಸ್ಕೃತಿ ಉತ್ಸವ-2024ರ ಅಂಗವಾಗಿ ನಡೆಯುವ ಕ್ರೀಡಾಕೂಟಕ್ಕೆ ಶ್ರೀ ಜಯದೇವ ಕಪ್-2024 ಎಂದು ಹೆಸರಿಡಲಾಗಿದ್ದು, ರಾಜ್ಯಮಟ್ಟದ ಹೊನಲುಬೆಳಕಿನ ಮಹಿಳೆಯರ ಮತ್ತು ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಮಾಜಿ ನಗರಸಭಾ ಸದಸ್ಯ ಶ್ರೀರಾಮ್ ಅವರು ತಿಳಿಸಿದ್ದಾರೆ.

ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳ ಮಾರ್ಗದರ್ಶನದಲ್ಲಿ ಈ ಕ್ರೀಡಾಕೂಟವು ಮೂರುದಿನಗಳ ಕಾಲ ನಡೆಯಲಿದ್ದು, ಕ್ರೀಡಾಕೂಟ ಸಮಿತಿಯ ಗೌರವಾಧ್ಯಕ್ಷರಾಗಿ ಭೀಮಸಮುದ್ರದ ಉದ್ಯಮಿ ಶಂಕರಮೂರ್ತಿ, ಉಪಾಧ್ಯಕ್ಷರುಗಳಾಗಿ ಸಿ.ಟಿ. ಕಷ್ಣಮೂರ್ತಿ ಮತ್ತು ಸಿದ್ದವ್ವನಹಳ್ಳಿ ಪರಮೇಶ್, ಕಾರ್ಯದರ್ಶಿಯಾಗಿ ಅನಿಸ್, ಸಂಘಟನಾ ಕಾರ್ಯದರ್ಶಿಯಾಗಿ ರವಿ ಮಲ್ಲಾಪುರ, ಸಹಕಾರ್ಯದರ್ಶಿಗಳಾಗಿ ಹೆಚ್.ಎಂ. ಮಂಜುನಾಥ್, ಮೆದೇಹಳ್ಳಿ ವಿಜಯಕುಮಾರ್, ಸಂಘಟಕರಾಗಿ ಮಹೇಶ್, ನಾಗರಾಜ್ ನಂದಿಪುರ, ಸಿರಾಜ್, ರಾಮನಾಯ್ಕ್ ಅವರುಗಳನ್ನು ನೇಮಿಸಲಾಗಿದೆ.

ಮಹಿಳಾ ಕ್ರೀಡಾಕೂಟದ ಅಧ್ಯಕ್ಷರಾಗಿ ಶ್ರೀಮತಿ ರುದ್ರಾಣಿ ಗಂಗಾಧರ್, ಉಪಾಧ್ಯಕ್ಷರಾಗಿ ಶ್ರೀಮತಿ ಮೋಕ್ಷರುದ್ರಸ್ವಾಮಿ, ಕಾರ್ಯದರ್ಶಿಯಾಗಿ ಶ್ರೀಮತಿ ಆರತಿ ಶಿವಮೂರ್ತಿಯಾಗಿ, ಖಜಾಂಚಿಯಾಗಿ ಶ್ರೀಮತಿ ಲತಾ ರಮೇಶ್ ಟಿ.ಕೆ. ಅವರನ್ನು ನೇಮಕ ಮಾಡಲಾಗಿದೆ ಎಂದು ಕ್ರೀಡಾಕೂಟದ ಅಧ್ಯಕ್ಷರಾದ ಶ್ರೀರಾಮ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...