Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಸದ್ಗುರು ಕಬೀರಾನಂದಸ್ವಾಮಿ ಆಶ್ರಮದಲ್ಲಿ  ಅಕ್ಟೋಬರ್ 15 ರಿಂದ 24ರವರಗೆ ಶರನ್ನವರಾತ್ರಿ ಕಾರ್ಯಕ್ರಮ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, (ಅಕ್ಟೋಬರ್. 11) : ನಗರದ ಕಬೀರಾನಂದ ನಗರದ ಶ್ರೀ ಸದ್ಗುರು ಕಬೀರಾನಂದಸ್ವಾಮಿ ಆಶ್ರಮದಲ್ಲಿ ಶ್ರೀ ಭಗವತಿ ಬಗಳಾಂಬಿಕಾದೇವಿ ಆವರಣದಲ್ಲಿ  ಅಕ್ಟೋಬರ್ 15 ರಿಂದ 24ರವರಗೆ ಶರನ್ನವರಾತ್ರಿ ಕಾರ್ಯಕ್ರಮ ವಿಜಯದಶಮಿಯವರೆಗೆ ಶ್ರೀ ದೇವಿ ಪುರಾಣ ನಡೆಯಲಿದೆ ಎಂದು ಆಶ್ರಮದ ಗಣಪತಿ ಶಾಸ್ತ್ರಿ ತಿಳಿಸಿದ್ದಾರೆ.

ಶ್ರೀ ಮಠದ ಪೀಠಾಧ್ಯಕ್ಷರಾದ ಸದ್ಗುರು ಶ್ರೀ ಶಿವಲಿಂಗಾನಂದ ಶ್ರೀಗಳು ಸಾನಿದ್ಯದಲ್ಲಿ ಅ.15 ರಿಂದ 24ರವರೆಗೆ ಪ್ರತಿ ದಿನ ಸಂಜೆ 7 ರಿಂದ 9ವರೆಗೆ ಗೊಲ್ಲರಹಟ್ಟಿಯ ಶಿ.ಈರಣ್ಣ ಮಲ್ಲಾಪುರ ಇವರು ಚರಿತ್ರೆಯನ್ನು ಪಠಿಸಲಿದ್ದು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಹುರಳಿ ಬಸವರಾಜು ರವರು ಚರಿತ್ರೆಯನ್ನು ಪ್ರವಾಚನ ಮಾಡಲಿದ್ದಾರೆ.

ಆಯಿತೋಳಿನ ಜಾನಪದ ಕಲಾವಿದರಾದ ಜಿ.ಎನ್.ವಿರೂಪಾಕ್ಷಪ್ಪ ಹಾರ್ಮೋನಿಯಂ, ಜಿ.ಸಿ.ಯಶವಂತಕುಮಾರ್ ತಬಲವನ್ನು ನುಡಿಸಲಿದ್ದಾರೆ.
ಅಕ್ಟೋಬರ್ 23ರ ಸೋಮವಾರ ಆಯುಧ ಪೂಜೆ, ಮಹಾನವಮಿ, ಶ್ರೀ ಸದ್ಗುರು ಕಬೀನಂದಾಶ್ರಮದ ಸಂಸ್ಕøತ ಪಾಠಶಾಲೆಯ ಶಿಕ್ಷಕರಾದ ಸುಬ್ರಾಯ ತಿಮ್ಮಣ್ಣ ಭಟ್ಟರಿಂದ ಚಂಡಿಕಾ ಹೋಮ ನಡೆಯಲಿದೆ. ಬನ್ನಿಯನ್ನು ಮುಡಿಯಲಾಗುವುದು. ಸಂಜೆ 7 ಗಂಟೆಗೆ ಶ್ರೀ ದೇವಿ ಪುರಾಣ ಮುಕ್ತಾಯವಾಗಲಿದೆ.

ಅಕ್ಟೋಬರ್ 24 ರಂದು ಮಂಗಳವಾರ ವಿಜಯದಶಮಿ ಸಂಜೆ 4 ಗಂಟೆಗೆ ಶ್ರೀ ಮಠದ ಕತೃಗಳಾದ ಶ್ರೀ ಸದ್ಗುರು ಕಬೀರಾನಂದ ಮಹಾ ಸ್ವಾಮಿಗಳವರ 117 ನೇ ವರ್ಷದ ಜಯಂತ್ಯೋತ್ವವ (ತೊಟ್ಟಿಲು ಪೂಜೆ) ಕಾರ್ಯಕ್ರಮ ನಡೆಯಲಿದೆ. ಪ್ರತಿ ದಿನ ಸಂಜೆ 5.30 ರಿಂದ 6.30ರವರೆಗೆ ಸಂಸ್ಕøತ ಪಾಠಶಾಲೆಯ ಶಿಕ್ಷಕಿಯಾದ ಶ್ರೀಮತಿ ಬಿ.ಕೆ.ಸುಮನ ಇವರಿಂದ ಲಲಿತಾ ಸಹಸ್ರನಾಮ ಸ್ತೋತ್ರ ನಡೆಸಿಕೊಡಲಿದ್ದಾರೆ. ಶ್ರೀ ದೇವಿಗೆ ನಿತ್ಯವು ಪಂಚಾಮೃತ ಅಭೀಷೇಕ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!