Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡಿಕೆ ಶಿವಕುಮಾರ್ ಧರಿಸಿರುವ ಶಾಲು 59 ಸಾವಿರ : ಬಿಜೆಪಿಯಿಂದ ವ್ಯಂಗ್ಯ..!

---Advertisement---

 

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್-ಡಿಸೇಲ್ ದರ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ತೈಲ ಬೆಲೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಈಗಾಗಲೇ ಬೃಹತ್ ಪ್ರತಿಭಟನೆಯನ್ನು ಮಾಡಿದೆ. ಇದೀಗ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ಮತ್ತೆ ಚಾಟಿ ಬೀಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಧರಿಸಿರುವ ಶಾಲಿನ ಮೇಲೆ ಕಣ್ಣು ಹಾಕಿದೆ. ಶಾಲಿನ ಫೋಟೋ ಜೊತೆಗೆ ಅದರ ಬೆಲೆ ಎಷ್ಟು ಎಂಬುದನ್ನು ಹಾಕಿದ್ದಾರೆ.

ಬಿಜೆಪಿ ನಾಯಕರು ಸಾಕ್ಷಿ ಸಮೇತ ಹಾಕಿರುವ ಪ್ರಕಾರ ಡಿಸಿಎಂ ಡಿಕೆ ಶಿವಕುಮಾರ್ ಹಾಕಿರುವ ಶಾಲಿನ ಬೆಲೆ 59,500 ರೂಪಾಯಿ ಆಗಿದೆ. ಈ ಸಂಬಂಧ ಬಿಜೆಪಿ ಟ್ವೀಟ್ ಮಾಡಿರುವುದು ಹೀಗೆ, ‘ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ @DKShivakumar ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ₹59,500!!! ಬೆಲೆಯೇರಿಕೆಯಿಂದ ಜನ ಒಂದ್ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ, ಆದರೆ ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಟ್ವೀಟ್ ಮಾಡಿದ್ದಾರೆ.

ರಾಜಕಾರಣದಲ್ಲಿ ವಿರೋಧ ಪಕ್ಷಗಳು ಸಣ್ಣ ಸಣ್ಣ ತಪ್ಪುಗಳನ್ನು ಹುಡುಕಿ, ಅದರ ಬಗ್ಗೆ ಮಾತನಾಡುವುದು ಅವರ ಕೆಲಸವಾಗಿದೆ. ಆದರೆ ರಾಜ್ಯದಲ್ಲಿ ಜನ ಎಷ್ಡೋ ಸಮಸ್ಯೆಗಳಿಂದ ನರಳುತ್ತಾರೆ. ಯಾವುದೇ ರಾಜಕೀಯ ಪಕ್ಷ ಆಡಳಿತಕ್ಕೆ ಬಂದರೂ ಅಭಿವೃದ್ದಿ, ಜನರ ಸಮಸ್ಯೆ ಬಗೆ ಹರಿಯುವುದು ಬಹಳ ಕಷ್ಟ. ಬೆಲೆ ಏರಿಕೆಯಾಗಲಿ, ಪ್ರವಾಹ ಬಂದು ಬೆಳೆ ನಷ್ಡವಾಗಲಿ ನಾವೇ ಅನುಭವಿಸಬೇಕು. ರಾಜಕಾರಣಿಗಳು ಅವರ ಅದ್ದೂರಿ ಜೀವನ ನಡೆಸುವುದೇನು ಕಡಿಮೆ ಆಗಲ್ಲ ಅನ್ನೋದು ಮಧ್ಯಮ ವರ್ಗದ ಜನರ ಬೇಸರದ ನುಡಿಯಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...