Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಡ್ಲಘಟ್ಟ ಕೇಸ್ : ರಕ್ಷಣೆ ಕೋರಿ ಪೊಲೀಸ್ ಠಾಣೆ‌ಮೆಟ್ಟಿಲೇರಿದ ಪೌರಾಯುಕ್ತೆ..!

---Advertisement---

ಚಿಕ್ಕಬಳ್ಳಾಪುರ: ಪೌರಾಯುಕ್ತೆ ಅಮೃತಾ ಈಗ ಜೀವ ರಕ್ಷಣೆಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾಂಗ್ರೆಸ್ ನಾಯಕ ರಾಜೀವ್ ಗೌಡ ಜೊತೆಗೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದಿತ್ತು. ಆ ಕೇಸ್ ಗೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಆಗ್ತಾನೆ ಇದೆ. ಈಗಾಗಲೇ ಕೆಪಿಸಿಸಿಯಿಂದಾನೂ ರಾಜೀವ್ ಗೌಡರನ್ನ ಅಮಾನತು ಮಾಡಲಾಗಿದೆ. ಇದರ ಮಧ್ಯೆ ಅಮೃತಾ ಅವರಿಗೆ ಬೆದರಿಕೆ ಬಂದಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪೌರಾಯುಕ್ತೆ ಅಮೃತಾಗೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಲಾಗಿದೆಯಂತೆ. ಹೀಗಾಗಿ ಪೊಲೀಸರಿಗೆ ಅಮೃತಾ ಪತ್ರದ ಮೂಲಕ ರಕ್ಷಣೆ ಕೋರಿದ್ದಾರೆ. ಸದ್ಯ ಜೀವ ಭಯದಲ್ಲಿಯೇ ಅಮೃತಾ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅತ್ತ ರಾಜೀವ್ ಗೌಡ ಪರ ವಕೀಲರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿಯೂ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ಎರಡನೇ ವಿಚಾರಣೆ ಇಂದು ನಡೆದಿದೆ. ಸರ್ಕಾರಿ ಅಭಿಯೋಜಕರು ಸಲ್ಲಿಸಿದ್ದ ಆಕ್ಷೇಪಣೆಗಳಿಗೆ ರಾಜೀವ್ ಗೌಡ ಪರ ವಕೀಲ ವಿವೇಕ್ ಸುಬ್ಬಾ ರೆಡ್ಡಿ ವಾದ ಮಂಡನೆ ಮಾಡಿದ್ದರು. ನ್ಯಾಯಾಲಯ ವಾದ – ಪ್ರತಿವಾದ ಆಲಿಸಿದ್ದು, ಜನವರಿ 24ಕ್ಕೆ ಆದೇಶ ಕಾಯ್ದಿರಿಸಿದೆ. ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ಸಿಗುತ್ವಾ ಇಲ್ವಾ ಎಂಬುದು ನಾಳೆ ಗೊತ್ತಾಗಲಿದೆ. ರಾಜೀವ್ ಗೌಡ ಅವರ ಆಡಿಯೋ ಕೇಳಿ ಕಾಂಗ್ರೆಸ್ ನಾಯಕರೇ ಶಾಕ್ ಆಗಿದ್ದರು. ಅದರಲ್ಲೂ ರಾಜೀವ್ ಗೌಡ ಅವರನ್ನು ಹತ್ತಿರದಿಂದ ಕಂಡಂತವರು ಕೂಡ ಶಾಕ್ ಆಗಿದ್ದರು. ಅವರು ಮಾಡಿದ ತಪ್ಪಿಗೆ ಈಗಾಗಲೇ ಎಫ್ಐಆರ್ ದಾಖಲಾಗಿದೆ, ಕೆಪಿಸಿಸಿಯಿಂದ ಅಮಾನತು ಕೂಡ ಆಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now