Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್..!

Facebook
Twitter
Telegram
WhatsApp

ಶಿವಮೊಗ್ಗ: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡ ಬಿಜಾಪುರದಲ್ಲಿ ಅರೆಸ್ಟ್ ಆಗಿದ್ದಾರೆ. ಶರತ್ ಕಲ್ಯಾಣಿ ಬಂಧಿತ ಆರೋಪಿಯಾಗಿದ್ದಾರೆ. ಇವರು ಬಿಜೆಪಿಯ ಸೋಷಿಯಲ್ ಮೀಡಿಯಾ ಸಂಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಶರತ್ ಕಲ್ಯಾಣಿ 42 ವರ್ಷದ ವಿಚ್ಛೇದಿತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು. ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಕೂಡ ಬೇಳೆಸಿದ್ದ ಆರೋಪ ಕೇಳಿ ಬಂದಿತ್ತು. ದೂರು ದಾಖಲಾಗುತ್ತಿದ್ದಂತೆ ಶರತ್ ಕಲ್ಯಾಣಿ ತಲೆ‌ಮರೆಸಿಕೊಂಡಿದ್ದರು. ಸದ್ಯ ಪೊಲೀಸರು ಪತ್ತೆ ಹಚ್ಚಿದ್ದು ಬಿಜಾಪುರದಲ್ಲಿ ಲಾಕ್ ಆಗಿದ್ದಾರೆ.

ಒಂದು ವಾರದಿಂದ ಕಾಣಿಸದೆ ನಾಪತ್ತೆಯಾಗಿದ್ದರು. ಕಡೆಗೂ ಪೊಲೀಸರು ತಮ್ಮ ಕಾಂಟ್ಯಾಕ್ಟ್ ಗಳನ್ನ ಬಳಸಿ, ತಮ್ಮ ಬುದ್ದಿವಂತಿಕೆ ಉಪಯೋಗಿಸಿ ಶರತ್ ಕಲ್ಯಾಣಿಯನ್ನ ಹಿಡಿದಿದ್ದಾರೆ. ಶಿವಮೊಗ್ಗದ ಮಹಿಳಾ ಪೊಲೀಸರು ಆತನ ಕೈಗೆ ಕೋಳ ತೊಡಿಸಿದ್ದಾರೆ.

ಜುಲೈ 26ರಂದು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರೀತಿ ನಾಟಕವಾಡಿ, ನಂಬಿಸಿದ್ದ, ವಂಚನೆ ಕೇಸು ಒಂದು ಕಡೆಯಾದರೆ, ನಾಲ್ಕು ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣ ಕೂಡ ದಾಖಲಾಗಿತ್ತು. ಹೀಗಾಗಿ ಮಹಿಳಾ ಪೊಲೀಸರು ಈತ‌ನನ್ನು ಎಲ್ಲಿಯೇ ಅಡಗಿದ್ದರು ಬಿಡದೇ, ಅರೆಸ್ಟ್ ಮಾಡಿದ್ದಾರೆ. ಬಿಜೆಪಿಯ ಸೋಷಿಯಲ್ ಮೀಡಿಯಾದ ಸಂಚಾಲಕರಾಗಿ, ಬೇರೊಬ್ಬರಿಗೆ ಮೋಸ ಮಾಡಿದ್ದಾನೆ. ವಿಚ್ಚೇಧಿತ ಮಹಿಳೆಗೆ ಬಣ್ಣ ಬಣ್ಣದ ಮಾತುಗಳನ್ನಾಡಿ, ಮದುವೆ ಆಗಿಯೇ ಬಿಡುತ್ತೇನೆಂದು ನಂಬಿಸಿದ್ದಾನೆ. ಈತ ಹೇಳಿದ್ದೆಲ್ಲ ಸುಳ್ಳು, ಮದುವೆಯಾಗುವುದು ಸುಳ್ಳು ಎಂದು ತಿಳಿದ ಮೇಲೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ತಲೆಮರೆಸಿಕೊಂಡಿದ್ದವನನ್ನು ಕರೆತಂದು, ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!