Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಡಾಗಿದ್ದ ಕೈ ಜೋಡಿಸಿ ಯಶಸ್ವಿಯಾದ ಶಿವಮೊಗ್ಗ ವೈದ್ಯರು..!

Facebook
Twitter
Telegram
WhatsApp

ಶಿವಮೊಗ್ಗ: ವೈದ್ಯೋ ನಾರಾಯಣೇ ಹರಿ ಅನ್ನೋ ಮಾತು ಸುಳ್ಳಲ್ಲ. ಸಂಕಷ್ಟದ ಕಾಲಕ್ಕೆ ವೈದ್ಯರೆ ದೇವರಾಗುತ್ತಾರೆ ಎಂಬುದನ್ನು ಇದೀಗ ಶಿವಮೊಗ್ಗ ಆಸ್ಪತ್ರೆಯ ವೈದ್ಯರು ನಿರೂಪಿಸಿದ್ದಾರೆ. ಇನ್ನು ಕೈ ಉಳಿಯುವುದು ಸಾಧ್ಯವೇ ಇಲ್ಲ ಎಂಬ ಪರಿಸ್ಥಿತಿಯಲ್ಲೂ ಕೈ ಜೋಡಿಸಿ, ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ.

ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು. ಆ ಮುಂಗೈನ್ನು ಕಾರ್ಮಿಕ ಐಸ್ ಬಾಕ್ಸ್ ನಲ್ಲಿಟ್ಟುಕಿಂಡು ಆಸ್ಪತ್ರೆಗೆ ಬಂದಿದ್ದ. ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿಗೆ ಓಡಿ ಬಂದಿದ್ದ. ಅಲ್ಲಿನ ವೈದ್ಯರು ತಕ್ಷಣ ಕಾರ್ಯಪ್ರವೃತ್ತರಾಗಿದ್ದು, ತುಂಡಾಗಿದ್ದ ಕೈಯನ್ನು ಜೋಡಿಸುವ ಕೆಲಸ ಮಾಡಿದ್ದಾರೆ. ಮುಂಗೈ‌ ಮಾಂಸ ಖಂಡ, ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಜೋಡಿಸಿದ್ದಾರೆ.

ವ್ಯಾಸ್ಕ್ಯುಲರ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞ ಡಾ.ಮಂಜುನಾಥ್ ನೇತೃತ್ವದ ತಜ್ಞರ ತಂಡ ಈ ಆಪರೇಷನ್ ಮಾಡುವಲ್ಲಿ ಯಶಸ್ವಿಯಾಗಿದೆ‌. ಇನ್ನು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸತತ ಏಳು ಗಂಟೆ್ಳ ಕಾಲ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಈ ಮೂಲಕ ಸಂಪೂರ್ಣವಾಗಿ ಕತ್ತರಿಸಿಕೊಂಡು ಹೋಗಿದ್ದ ಕೈಯನ್ನು ಈಗ ಜೋಡಿಸಿದ್ದಾರೆ. ಸದ್ಯ ಇನ್ನು ಆ ವ್ಯಜ್ತಿ ಆಸ್ಒತ್ರೆಯಲ್ಲಿಯೇ ಇದ್ದಾನೆ.‌ ಆದರೆ ಆತನಿಗೆ ವೈದ್ಯರು ಹೊಸ ಬದುಕನ್ನು ಕೊಟ್ಟಿದ್ದಾರೆ. ಮುಂಗೈ ಕತ್ತರಿಸಿಕೊಂಡ ಬಳಿಕ ಕಾರ್ಮಿಕ ಕೂಡ ಆತಂಕಗೊಳ್ಳದೆ ಐಸ್ ಬಾಕ್ಸ್ ಒಳಗೆ ಉಟ್ಟುಕೊಂಡು, ಆಸ್ಪತ್ರೆಗೆ ಬಂದಿದ್ದು, ಆತನ ಕೈ ಮರಳಿ ಪಡೆಯಲು ಅನುಕೂಲವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!