Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನಪರ ವೈದ್ಯರತ್ನ ಎಂದು ಖ್ಯಾತರಾಗಿದ್ದ ಶಿವಮೊಗ್ಗದ ನಾಟಿ ವೈದ್ಯ ನಿಧನ..!

---Advertisement---

ಶಿವಮೊಗ್ಗ: ವೈದ್ಯೋ ನಾರಾಯಣ ಹರಿ ಎಂಬ ಮಾತಿದೆ. ಈ ನಾಣ್ನುಡಿಯಂತೆ ಜನರ ಪರವಾಗಿ ವೈದ್ಯಕೀಯ ಸೇವೆ ಮಾಡುವುದು ತುಂಬಾ ಕಡಿಮೆ ಜನ. ವೈದ್ಯ ವೃತ್ತಿಯಲ್ಲಿ ಜನರ ಮನಸ್ಸು ಗೆಲ್ಲುವುದು ಸುಲಭವಲ್ಲ. ಹಾಗೇ ಎಲ್ಲರ ಪಾಲಿನ ನಡಚ್ಚಿನ ವೈದ್ಯರಾಗಿದ್ದವರು ಶಿವಮೊಗ್ಗದ ನಾಟಿ ಎಂ.ಬಿ.ಶಿವಣ್ಣ ಗೌಡ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದವರು ಶಿವಣ್ಣ ಗೌಡ. ವಯೋ ಸಹಜ ಕಾಯಿಲೆಯಿಂದ ಇಂದು ಸಾವನ್ನಪ್ಪಿದ್ದಾರೆ. ಜನಪದ ವೈದ್ಯ ರತ್ನ, ನಾಟಿ ವೈದ್ಯ ಎಂದೇ ಖ್ಯಾತಿ ಪಡೆದಿದ್ದರು. ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಶಿವಮೊಗ್ಗ ಜಿಲ್ಲೆಯ ಮಂದಿ ಮರುಕ ವ್ಯಕ್ತಪಡಿಸಿದ್ದಾರೆ. ಕಂಬನಿ ಮಿಡಿದಿದ್ದಾರೆ. ಇಂಥ ವೈದ್ಯನನ್ನು ಕಳೆದುಕೊಂಡಿದ್ದಕ್ಕೆ ದುಃಖಿತರಾಗಿದ್ದಾರೆ.

ಶಿವಣ್ಣ ಗೌಡ ಅವರು, ಕಳೆದ ನಾಲ್ಕೈದು ದಿನಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿಯಲ್ಲಿ ಯಾವುದೇ ಪ್ರಚಾರವಿಲ್ಲದೆ ಯಶಸ್ಸನ್ನು ಕಂಡಿದ್ದರು. ಪಾರಂಪರಿಕ ನಾಟಿ ಔಷಧ ನೀಡುತ್ತಾ ಸಾವಿರಾರು ಜನರ ಬದುಕಿಗೆ ಆಶಾ ಕಿರಣರಾಗಿದ್ದರು. ಶಿವಣ್ಣ ಅವರಿಂದ ಅನೇಕ ದೊಡ್ಡ ದೊಡ್ಡ ವ್ಯಕ್ತಿಗಳು ಅನುಕೂಲ ಪಡೆದುಕೊಂಡಿದ್ದಾರೆ. ಮಾಜಿ ಸಚಿವೆ ಮನೋರಮ ಮದ್ವರಾಜ್, ಪತ್ರಕರ್ತೆ ಗೌರಿ ಲಂಕೇಶ್, ಸಾಹಿತಿ ಚಂದ್ರಶೇಖರ್ ಕಂಬಾರ್, ಮಾಜಿ ಸಚಿವ ಈಶ್ವರಪ್ಪ ಹಾಗೂ ಹೊರ ರಾಜ್ಯಗಳ ಹಾಗೂ ಹೊರ ರಾಷ್ಟ್ರದ ಅನೇಕರು ಇವರಿಂದ ಔಷಧಿ ಪಡೆದಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ವೈದ್ಯ ಶಿವಣ್ಣ ಗೌಡ ಅವರ ಸೇವೆಯನ್ನು ಮೆಚ್ಚಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment