Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿರಾಡಿ ಘಾಟ್ ಗುಡ್ಡ ಕುಸಿತ : ಸ್ಥಳಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಕ್..!

Facebook
Twitter
Telegram
WhatsApp

ಹಾಸನ: ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು, ಶಿರೂರು ಈಗ ಶಿರಾಡಿ ಘಾಟ್ ಕೂಡ ಗುಡ್ಡ ಕುಸಿತದಿಂದ ಹೊರತಾಗಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ತಂಡದೊಂದಿಗೆ ಗುಡ್ಡ ಕುಸಿತದ‌ ಸ್ಥಳಕ್ಕೆ‌ ಬಂದಿದ್ದಾರೆ. ಈ ವೇಳೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

 

ಗುಡ್ಡ ಕುಸಿತದ ಭೀಕರತೆಯನ್ನು ಕಂಡು ಶಾಕ್ ಆದ ಸಿದ್ದರಾಮಯ್ಯ ಅವರು, ರಾಷ್ಟ್ರೀಯ ಹೆದ್ದಾರಿ‌ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಜೊತೆಗೆ ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದನ್ನು ಪ್ರಶ್ನಿಸಿದ್ದಾರೆ. ಗುಡ್ಡ ಕುಸಿತಕ್ಕೆ ಇದು ಕೂಡ ಒಂದು ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂ ಸ್ವಾಧೀನಗೊಳಿಸಿಕೊಳ್ಳುವುದು. ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ..? ಗುಡ್ಡಗಳನ್ನು 30-45 ಅಡಿ ಕತ್ತರಿಸಿ ತಡೆಗೋಡೆಗಳನ್ನು ನಿರ್ಮಿಸಿದ್ದರೆ ಗುಡ್ಡ ಕುಸಿತ ತಡೆಯಬಹುದಿತ್ತಲ್ಲವೇ ಎಂದಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿವರಣೆ ನೀಡಿದ್ದು, ಒಟ್ಟು 45 ಕಿಲೋ ಮೀಟರ್ ನಲ್ಲಿ 35 ಕಿಲೋ ಮೀಟರ್ ಹೈವೇ ಕಾಮಗಾರಿ ಮುಗಿದಿದೆ. ಇನ್ನು 10 ಕಿಲೋ ಮೀಟರ್ ಮಾತ್ರ ಬಾಕಿ ಇದೆ. ಆದರೆ ಎಲ್ಲಿಯೂ ತಡೆಗೋಡೆ ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷಿಸಿ, ಅದರ ಆಧಾರದ‌ ಮೇಲೆ‌ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಂತೆ ಕಾಣಿಸುತ್ತಿಲ್ಲ ಎಂದು ವರದಿ ಒಪ್ಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!