Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರ ಕಟ್ಟಡದ ಕೆಲಸವನ್ನೇ ನಿಲ್ಲಿಸುವ ಹಂತಕ್ಕೆ ಬಂದುಬಿಟ್ಟರಾ ಶಿವಸೇನೆ ಪುಂಡರು..!

Facebook
Twitter
Telegram
WhatsApp

 

ಬೆಳಗಾವಿ: ಶಿವಸೇನೆ ಪುಂಡರ ಕೆಟ್ಟ ನಡವಳಿಕೆ ತೀರಾ ಅತಿಯಾಗಿದೆ. ರಾಯಣ್ಣನ ಪ್ರತಿಮೆ ಧ್ವಂಸ ಮಾಡಿ ಕನ್ನಡಿಗರನ್ನ ಕೆಣಕಿದ್ರು, ಕನ್ನಡದ ಧ್ವಜ ಸುಟ್ಟು ಆಕ್ರೋಶ ಹುಟ್ಟುವಂತೆ ಮಾಡಿದ್ರು. ಇದೀಗ ಸಚಿವೆಯ ಕಟ್ಟಡ ಕೆಲಸವನ್ನೇ ತಡೆದಿದ್ದಾರೆ. ಪದೇ ಪದೇ ಎಂಇಎಸ್ ಪುಂಡರೇ ಕಾಲು ಕೆರೆದುಕೊಂಡು ಬರುತ್ತಿದ್ದಾರೆ.

ಕೊಲ್ಲಾಪುರ ನಗರದ ಶಾಹುನಾಕಾ ಬಳಿ ಸಚಿವೆ ಶಶಿಕಲಾ ಜೊಲ್ಲೆಗೆ ಸಂಬಂಧಿಸಿದಂತ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಆ ಕಟ್ಟಡದ ಬಳಿ ಹೋದ ಎಂಇಎಸ್ ಪುಂಡರು ದಾಳಿ ಮಾಡಿ ಕಟ್ಟಡ ಕಾಮಗಾರಿಯನ್ನ ನಿಲ್ಲಿಸಿದ್ದಾರೆ.

ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದಾರೆ. ಕೆಲಸ ಮಾಡದಂತೆ ಹೆಸದರಿಸಿ ಕಳುಹಿಸಿದ್ದಾರೆ. ನಮ್ಮವರನ್ನ ಬಂಧಿಸಿದ್ದಾರೆ. ಅವರನ್ನ ಬಿಡುವವರೆಗೂ ಕಟ್ಟಡ ಕಾಮಗಾರಿ ನಡೆಯಲು ಬಿಡುವುದಿಲ್ಲ. ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಕಟ್ಟಡ ಕಾರ್ಮಿಕರಿಗೆ ಕೆಲಸ ಮಾಡದಂತೆ ಬೆದರಿಕೆ ಹಾಕಿದ್ದಾರೆ.

ಹೀಗೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿರುವ ಎಂಇಎಸ್ ಪುಂಡರ ನಡವಳಿಕೆಗೆ ಆಕ್ರೋಶ ವ್ತಕ್ತವಾಗಿದ್ದು, ಎಂಇಎಸ್ ಬ್ಯಾನ್ ಮಾಡಬೇಕು, ಅವರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಇಂದು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!