ಡಿಸಿಎಂ ಡಿಕೆಶಿ ಭೇಟಿ ಮಾಡಿದ ಶಿವ ರಾಜ್‍ಕುಮಾರ್ ದಂಪತಿ : ಲೋಕಸಭಾ ಚುನಾವಣೆಯ ಸಿದ್ಧತೆನಾ..?

1 Min Read

 

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನು ಹತ್ತು ತಿಂಗಳು ಇರುವಾಗಲೇ ಕಾಂಗ್ರೆಸ್ ಪಕ್ಷ ಭರ್ಜರಿ ಸಿದ್ಧತೆಯನ್ನು ನಡೆಸುತ್ತಿದೆ. ಈ ಮಧ್ಯೆ ಶಿವ ರಾಜ್‍ಕುಮಾರ್ ದಂಪತಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಬಂದಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಶಿವಣ್ಣ ಹಾಗೂ ಗೀತಾ ಅವರು ಬೇಟಿ ನೀಡಿದ್ದಾರೆ. ಡಿಕೆ ಶಿವಕುಮಾರ್ ದಂಪತಿ ಶಿವಣ್ಣ ದಂಪತಿಯನ್ನು ಸ್ವಾಗತಿಸಿದ್ದಾರೆ. ಮಧು ಬಂಗಾರಪ್ಪ ಕೂಡ ಶಿವಣ್ಣ ದಂಪತಿ ಜೊತೆಗೆ ಡಿಸಿಎಂ ಮನೆಗೆ ಭೇಟಿ ನೀಡಿದ್ದರು.

ಈ ವೇಳೆ ಮಾತನಾಡಿದ ಶಿವಣ್ಣ, ಇದು ಸೌಜನ್ಯದ ಭೇಟಿ ಅಷ್ಟೇ. ಮೊನ್ನೆ ತಾನೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೆವು. ಅಂದಿನಿಂದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಭೇಟಿ ಮಾಡಿದ್ದೇವೆ ಎಂದಿದ್ದಾರೆ.

ಇನ್ನು ಇದೆ ವೇಳೆ ಗೀತಾ ಶಿವ ರಾಜ್‍ಕುಮಾರ್ ಮಾತನಾಡಿ, ನಾನು ಶಿವಮೊಗ್ಗದಿಂದ ಭೇಟಿ ಮಾಡಬೇಕಾಗಿರುವುದನ್ನು ನಿರ್ಧರಿಸುವುದು ನಾನಲ್ಲ. ಪಕ್ಷ ಹಾಗೂ ನನ್ನ ತಮ್ಮ ಪ್ರಾಥಮಿಕವಾಗಿ ನಿರ್ಧಾರ ಮಾಡಬೇಕಾಗುತ್ತದೆ. ಇದೊಂದು ಸೌಜನ್ಯದ ಭೇಟಿ ಅಷ್ಟೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *