ಶಿವಮೊಗ್ಗ: ಈದ್ ಮಿಲಾದ್ ಆಚರಣೆ ವೇಳೆ ನಡೆದ ಗಲಭೆಗೆ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಸದ್ಯಕ್ಕೆ ಶಿವಮೊಗ್ಗವನ್ನು ಹತೋಟಿಗೆ ತಂದಿದ್ದಾರೆ. ನಿಶ್ಯಬ್ದವಾಗಿದೆ. ಆದರೆ ಅಂದು ಮೆರವಣಿಗೆ ವೇಳೆ ಬಾಣಂತಿಯ ಮನೆಯ ಮೇಲೂ ದಾಳಿ ನಡೆದಿದೆ. ಕೆಲವೊಂದು ಮನೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಬಾಣಂತಿಯ ಮನೆಯೂ ಒಂದು ಎನ್ನಲಾಗಿದೆ.
ರಾಗಿಗುಡ್ಡದಲ್ಲಿ ಒಂದು ಹಸುಗೂಸು, ಬಾಣಂತಿ ಇರುವ ಮನೆಯ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಬಾಣಂತಿಯ ಮನೆಯವರು ಗಾಬರಿಯಾಗಿದ್ದರಂತೆ. ಕಿಟಕಿ, ಗಾಜುಗಳನ್ನು ಒಡೆದು ಹಾಕಿದ್ದ ಮುಷ್ಕರ್ಮಿಗಳು, ಒಳಗೆ ನುಗ್ಗುವುದಕ್ಕೂ ಪ್ರಯತ್ನ ಪಟ್ಟಿದ್ದರಂತೆ. ಹೀಗಾಗಿ ಮನೆಯೊಳಗೆ ಇದ್ದವರು ಗಾಬರಿಯಾಗಿದ್ದರಂತೆ. ಅಂದು ಇಡೀ ಶಿವಮೊಗ್ಗದಲ್ಲಿಯೇ ಗಲಭೆಯ ವಾತಾವರಣ ನಿರ್ಮಾಣವಾಗಿತ್ತು. ಹಲವರಿಗೆ ಗಂಭೀರ ಗಾಯವೂ ಆಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂದಿನ ಭಯದ ಬಗ್ಗೆ ವ್ಯಕ್ತಿಯೊಬ್ಬರು ಹೇಳಿಕೊಂಡಿದ್ದು, ನಮ್ಮ ಅಕ್ಕಪಕ್ಕದಲ್ಲಿ ಅನ್ಯಕೋಮಿನ ಜನ ಇದ್ದರು. ನಮಗೆ ತೀರಾ ಪರಿಚಯಸ್ಥರೇ. ಆದರೆ ಅಂದು ನಮ್ಮ ಸಹಾಯಕ್ಕೆ ಬರಲಿಲ್ಲ. ಅಲ್ಲದೆ ಅಂದು ಅವರ ಮನೆ ಮೇಲೆ ಯಾವುದೇ ರೀತಿಯ ದಾಳಿ ಮಾಡದೆ ನಮಗೆ ಮಾತ್ರ ತೊಂದರೆ ಕೊಟ್ಟಿದ್ದಾರೆ. ಒಂದು ತಿಂಗಳ ಮಗು ಮನೆಯಲ್ಲಿತ್ತು. ಕಫ ಕಟ್ಟಿಕೊಂಡರು ಕೂಡ ಅದಕ್ಕೆ ಆಸ್ಪತ್ರೆಗೆಂದು ಹೊರಗೆ ಕರೆದುಕೊಂಡು ಹೋಗುವುದಕ್ಕೂ ಭಯವಾಗುತ್ತಿತ್ತು ಎಂದಿದ್ದಾರೆ.
ಶಿವಮೊಗ್ಗದ ಗಲಭೆಗೆ ಸಂಬಂಧಿಸಿದಂತೆ ಹಲವರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾಜಿ ಸಚಿವ ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದಾರೆ. ಈ ವೇಳೆ ಗಲಭೆಕೋರರ ಬಗ್ಗೆ ಆಕ್ರೋಶವನ್ನು ಹೊರ ಹಾಕಿದ್ದರು.
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…