Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವರಾಮ್ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ

Facebook
Twitter
Telegram
WhatsApp

ಕಾರವಾರ : ಶಾಸಕ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತಿತ್ತು. ಆದರೆ ಈಗ ಶಾಸಕ‌ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಬಲಿಗರೊಂದಿಗೆ ಸೇರ್ಪಡೆಯಾಗಿದ್ದಾರೆ. ವಿವೇಕ ಹೆಬ್ಬಾರ್‌ನ್ನ ಕಾಂಗ್ರೆಸ್ ಹಿರಿಯ ನಾಯಕ ಐವಾನ್ ಡಿಸೋಜಾ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿದ್ದಾರೆ.

ಈ ಬಗ್ಗೆ ಮಾತನಾಡಿರುವ ವಿವೇಕ್ ಹೆಬ್ಬಾರ್, ಬಿಜೆಪಿಯಲ್ಲಿ ಹುದ್ದೆ ನೀಡುವಲ್ಲಿ ನಮ್ಮ ಕಾರ್ಯಕರ್ತರಿಗೆ ಆದಂತಹ ತಾರತಮ್ಯದಿಂದ ಪಕ್ಷ ತೊರೆದಿದ್ದೇವೆ. ಅದರಲ್ಲೂ ನಮ್ಮ ತಂದೆ ಶಾಸಕ ಹೆಬ್ಬಾರ್‌ರನ್ನ ನಡೆಸಿಕೊಂಡ ರೀತಿಯಿಂದ ಬೇಸರವಾಗಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಲ್ಲಿ ಉನ್ನತ ಹುದ್ದೆಯಲ್ಲಿದ್ದವರೇ ಶಿವರಾಮ ಹೆಬ್ಬಾರನ್ನ ಸೋಲಿಸಲು ಪ್ರಯತ್ನಿಸಿದ್ದರು.

ಪ್ರಮುಖ ಹುದ್ದೆಯಲ್ಲಿದ್ದವರೇ ನಮ್ಮ ತಂದೆಯನ್ನ ಸೋಲಿಸಲು ಯತ್ನಿಸಿದ್ದರು. ಹಲವು ತಿಂಗಳ ಕಾಲ ಸಮಸ್ಯೆ ಬಗೆಹರಿಸಿಕೊಳ್ಳಲು ಪ್ರಯತ್ನ ನಡೆಸಿದ್ದೇವೆ. ಯಾರ್ಯಾರಿಗೆ ದೂರು ಕೊಡಬೇಕು ಕೊಡುವ ಕೆಲಸ ಮಾಡಿದ್ದೇವೆ. ಆದರೆ ಅಂತಿಮವಾಗಿ ಈ ನಿರ್ಧಾರಕ್ಕೆ ಬರುವ ಅನಿವಾರ್ಯತೆ ಎದುರಾಯಿತು. ಕಾರ್ಯಕರ್ತರ ಒತ್ತಾಯದಂತೆ ಈ ನಿರ್ಧಾರ ಕೈಗೊಂಡಿದ್ದೇವೆ.

 

ಪುತ್ರನನ್ನ ಮೊದಲು ಸೇರ್ಪಡೆಗೊಳಿಸಿ ನಂತರ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗುವ ಚರ್ಚೆ ವಿಚಾರವಾಗಿ ಮಾತನಾಡಿ, ಕಾರ್ಯಕರ್ತರಿಗೆ ನ್ಯಾಯ ಕೊಡಬೇಕಾಗಿತ್ತು, ಅವರ ಭಾವನೆಗಳಿಗೆ ಬೆಲೆ‌ ಕೊಡುವ ಉದ್ದೇಶದಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!