ಸಿ ಎಂ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆ ಜೋರಾಗಿದೆ. ಐದು ವರ್ಷಗಳ ಕಾಲ ನಮ್ಮ ತಂದೆಯೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ . ಆದರೆ ಇದೀಗ ಗಜೇಂದ್ರಗಡದ ತಳ್ಳಿಹಾಳ ಸಂಸ್ಥಾನ, ಕೋಡಿಮಠದ ಕಾಲಜ್ಞಾನ ಬ್ರಹ್ಮ ಸದ್ಗುರು ವಿಶ್ವಕಾಲಜ್ಞಾನ ಶಿವಯೋಗಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಗಟ್ಟುಂಡ ಯೋಗಿ ಅಟ್ಟುಂಡ ರಾಯ ಜಟ್ಟಿಯಂತೆ ಮೆಟ್ಟಿ ಮಂತ್ರಿಯ ಪದವಿಗೆ ಅಟ್ಟಿ ಬರುವನೋ ಡಿಕೆಶಿ” ಎಂದು ಭವಿಷ್ಯ ನುಡಿದಿದ್ದಾರೆ. ಕೆಂಪು ಭಾವುಟ ಹಾರಿಸುವಂತಹ ವ್ಯಕ್ತಿಗಳು ಮರಳಿ ಬರುತ್ತಾರೆ. ಮಾಘ-ಫಾಲ್ಗುಣ ಕಾಲದಲ್ಲಿ ಬದಲಾವಣೆಗಳ ಸೂಚನೆಗಳಿದ್ದು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅಟ್ಟಿ ಬರುವ ಸಾಧ್ಯತೆ ಇದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ 2016ರಲ್ಲಿ ‘ಕಂಬಳಿ ಉರುಳುತ್ತದೆ’ ಎಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. 2012ರ ಮಾರ್ಚ್ 12ರಂದು ನರೇಂದ್ರ ಮೋದಿ ಅವರು ಮೂರು ಬಾರಿ ದೇಶದ ಪ್ರಧಾನಿಯಾಗುತ್ತಾರೆ ಎಂದು ನುಡಿದ ಭವಿಷ್ಯ ನಿಜವಾಗಿತ್ತು.
ಮುಂಬರುವ ದಿನಗಳಲ್ಲಿ ಕರ್ನಾಟಕ ಮಾತ್ರವಲ್ಲದೇ ದೇಶದ ರಾಜಕೀಯದಲ್ಲಿಯೇ ದೊಡ್ಡ ಬದಲಾವಣೆ ನಡೆಯಲಿದೆ .ಹಾಸನ ನಗರದ ಶ್ರೀ ಹಾಸನಾಂಬ ದೇವಾಲಯದಲ್ಲಿ ಆಯೋಜಿಸಲಾದ ಸಾಮೂಹಿಕ 108 ಶ್ರೀ ದೇವಿ ಪುರಾಣ ಪಠಣ, ಹೋಮ ಹಾಗೂ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಪ್ರಧಾನಿಯಾಗಲಿ ಅಥವಾ ಮುಖ್ಯಮಂತ್ರಿಯಾಗಲಿ ಹಾಸನದಿಂದಲೇ ಹೊರಬರುವ ಸಾಧ್ಯತೆಗಳಿವೆ ಎಂದು ಹೇಳಿದರು.



















