ಹಿಂದೂ ದೇವಾಲಯದ ಮೇಲೆ ಮಸೀದಿ ಕಟ್ಟಲಾಗಿದೆ, ಇದನ್ನು ಸಾಬೀತು ಪಡಿಸಲು ಸಾಧ್ಯವಿದೆ : ವಿ ಎಚ್ ಪಿ ಮುಖ್ಯಸ್ಥ

ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದು, ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಈಗಾಗಲೃ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ. ಶಿವಲಿಂಗ ಮತ್ತೆಯಾದ ವಿಚಾರಕ್ಕೆ ಮಾತನಾಡಿರುವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್, ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿರುವ ಶಿವಲಿಂಗವೂ 12 ಜ್ಯೋತಿರ್ಲಿಂಗಗಳಲ್ಲಿ ಒಂದು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ಧಾರವನ್ನು ನಾವೂ ಸ್ವಾಗತಿಸುತ್ತೇವೆ. ಇದನ್ನೆಲ್ಲಾ ಸಾಬೀತು ಪಡಿಸಲು ಅನುಭವಿ ನ್ಯಾಯಾಧೀಶರ ಅಗತ್ಯವಿದೆ. ಮಸೀದಿಯಲ್ಲಿ ನಂದಿಯೂ ಕಂಡು ಬಂದಿದೆ. ಇದನ್ನು ಶಿವಲಿಂಗ ಎಂದು ಬಲವಾಗಿ ನಂಬಬಹುದು. 12 ಜ್ಯೋತಿರ್ಲಿಂಗಗಳಲ್ಲಿ ಇದು ಕೂಡ ಒಂದು ಎಂಬುದನ್ನು ಸಾಬೀತುಪಡಿಸಬಹುದು.

ಹಿಂದೂ ದೇವಾಲಯವನ್ನು ಮೊಘಲರು ವಶಪಡಿಸಿಕೊಂಡು ಅದರ ಅವಶೇಷಗಳ ಮೇಲೆ ಮಸೀದಿ ಕಟ್ಟಲಾಗಿದೆ. ಅದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ಸಾಧ್ಯವಿದೆ ಎಂದಿದ್ದಾರೆ. ಸದ್ಯ ಈ ಪ್ರಕರಣವನ್ನು ಉತ್ತರ ಪ್ರದೇಶದ ಉನ್ನತ ನ್ಯಾಯಾಂಗ ಸೇವೆಯ ಹಿರಿಯ ಮತ್ತು ಅನುಭವಿ ಅಧಿಕಾರಿಗಳು ಪರಿಶೀಲಿಸಬೇಕೆಂದು ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *